7:26 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸತತ 5ನೇ ಬಾರಿ ಗೆದ್ದಿರುವುದಕ್ಕೆ ಖಾದರ್ ಫುಲ್ ಖುಷ್: ರಾಜ್ಯದ ಜನತೆಯ ನೋವು ಓಟಿನ ಮೂಲಕ ವ್ಯಕ್ತವಾಗಿದೆ ಎಂದ ಮಿಸ್ಟರ್ ಕೂಲ್

16/05/2023, 16:28

ಮಂಗಳೂರು(reporterkarnataka.com): ಬಿಜೆಪಿ ಸರಕಾರದ 4 ವರ್ಷಗಳ ಆಡಳಿತ ಕಂಡ ಜನತೆ ತಮ್ಮ ನೋವನ್ನು ಓಟಿನ ಮೂಲಕ ವ್ಯಕ್ತಪಡಿಸಿರುವುದು ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿಗೆ ಕಾರಣವಾಯಿತು ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹೇಳಿದರು.
5ನೇ ಬಾರಿ ಗೆಲುವು ಸಾಧಿಸಿದ ಬಳಿಕ ಮೊದಲ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯ ಜನವಿರೋಧಿ, ದ್ವೇಷಪೂರಿತ ಆಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆ ಹೊರತುಪಡಿಸಿ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಗೆ ಅಭೂತಪೂರ್ವ ಜಯ ಸಿಕ್ಕಿದೆ ಎಂದರು.
ಬಿಜೆಪಿ ಸರಕಾರದ ತಾರತಮ್ಯ ದ, ದ್ವೇಷಪೂರಿತ, ಜನವಿರೋಧಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬೆಲೆಯೇರಿಕೆ, ಟ್ಯಾಕ್ಸ್, ಭ್ರಷ್ಟಾಚಾರದಿಂದ ತತ್ತರಿಸಿ ಹೋಗಿದ್ದಾರೆ. ಇದೆಲ್ಲ ಮತದಾನದ ಮೂಲಕ ವ್ಯಕ್ತವಾಗಿದೆ. ನಾನು ಕೂಡ ಮಂಗಳೂರು ಕ್ಷೇತ್ರದಲ್ಲಿ 5ನೇ ಬಾರಿ ಜಯಗಳಿಸಿದ್ದೇನೆ ಎಂದು ಅವರು ಖುಷಿ ಹಂಚಿಕೊಂಡರು.

ದ.ಕ. ಮತ್ತು ಉಡುಪಿ ಬಿಟ್ಟರೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಎಲ್ಲ ಕಡೆ ಕಾಂಗ್ರೆಸ್ ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ದ.ಕ. ಹಾಗೂ ಉಡುಪಿಯಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ 5 ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿ ಮುಂದಿನ ಚುನಾವಣೆ ಯಲ್ಲಿ ಕರಾವಳಿಯಲ್ಲೂ ಉತ್ತಮ ಸಾಧನೆ ಮಾಡಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು