2:49 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಸತತ 5ನೇ ಬಾರಿ ಗೆದ್ದಿರುವುದಕ್ಕೆ ಖಾದರ್ ಫುಲ್ ಖುಷ್: ರಾಜ್ಯದ ಜನತೆಯ ನೋವು ಓಟಿನ ಮೂಲಕ ವ್ಯಕ್ತವಾಗಿದೆ ಎಂದ ಮಿಸ್ಟರ್ ಕೂಲ್

16/05/2023, 16:28

ಮಂಗಳೂರು(reporterkarnataka.com): ಬಿಜೆಪಿ ಸರಕಾರದ 4 ವರ್ಷಗಳ ಆಡಳಿತ ಕಂಡ ಜನತೆ ತಮ್ಮ ನೋವನ್ನು ಓಟಿನ ಮೂಲಕ ವ್ಯಕ್ತಪಡಿಸಿರುವುದು ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿಗೆ ಕಾರಣವಾಯಿತು ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹೇಳಿದರು.
5ನೇ ಬಾರಿ ಗೆಲುವು ಸಾಧಿಸಿದ ಬಳಿಕ ಮೊದಲ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯ ಜನವಿರೋಧಿ, ದ್ವೇಷಪೂರಿತ ಆಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆ ಹೊರತುಪಡಿಸಿ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಗೆ ಅಭೂತಪೂರ್ವ ಜಯ ಸಿಕ್ಕಿದೆ ಎಂದರು.
ಬಿಜೆಪಿ ಸರಕಾರದ ತಾರತಮ್ಯ ದ, ದ್ವೇಷಪೂರಿತ, ಜನವಿರೋಧಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬೆಲೆಯೇರಿಕೆ, ಟ್ಯಾಕ್ಸ್, ಭ್ರಷ್ಟಾಚಾರದಿಂದ ತತ್ತರಿಸಿ ಹೋಗಿದ್ದಾರೆ. ಇದೆಲ್ಲ ಮತದಾನದ ಮೂಲಕ ವ್ಯಕ್ತವಾಗಿದೆ. ನಾನು ಕೂಡ ಮಂಗಳೂರು ಕ್ಷೇತ್ರದಲ್ಲಿ 5ನೇ ಬಾರಿ ಜಯಗಳಿಸಿದ್ದೇನೆ ಎಂದು ಅವರು ಖುಷಿ ಹಂಚಿಕೊಂಡರು.

ದ.ಕ. ಮತ್ತು ಉಡುಪಿ ಬಿಟ್ಟರೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಎಲ್ಲ ಕಡೆ ಕಾಂಗ್ರೆಸ್ ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ದ.ಕ. ಹಾಗೂ ಉಡುಪಿಯಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ 5 ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿ ಮುಂದಿನ ಚುನಾವಣೆ ಯಲ್ಲಿ ಕರಾವಳಿಯಲ್ಲೂ ಉತ್ತಮ ಸಾಧನೆ ಮಾಡಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು