10:09 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸತತ ಭೂಕಂಪಕ್ಕೆ ತುತ್ತಾದ ಚೆಂಬು ಗ್ರಾಮದಲ್ಲಿ  ವರುಣನ ಆರ್ಭಟ: ಭಾರೀ ಭೂಕುಸಿತ, ಮನೆಗೆ ತೀವ್ರ ಹಾನಿ

02/07/2022, 20:38

ಮಡಿಕೇರಿ(reporterkarnataka.com): ಸತತವಾಗಿ ನಾಲ್ಕು ಬಾರಿ ಭೂಕಂಪನಕ್ಕೊಳಗಾಗಿರುವ ದ.ಕ ಹಾಗೂ ಕೊಡಗು ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಚೆಂಬು ಗ್ರಾಮದಲ್ಲಿ ಶನಿವಾರ ಭೂಕುಸಿತ ಉಂಟಾಗಿದ್ದು, ಮನೆಯೊಂದು ಜಖಂಗೊಂಡಿದೆ.

ಶನಿವಾರ ಬೆಳಗಿನ ಜಾವ 3 ಗಂಟೆಗೆ ಚೆಂಬು ಗ್ರಾಮದ ಪೂಜಾರಿಗದ್ದೆ ಗಿರಿಧರ್ ಎಂಬವರ ಮನೆಯ ಮೇಲೆ ಭಾರೀ ಶಬ್ಧದೊಂದಿಗೆ ಮಣ್ಣು ಕುಸಿದಿದ್ದು, ಮನೆಯ ಒಂದು ಭಾಗ ಜಖಂಗೊಂಡಿದೆ.

ಭಾರೀ ಮಳೆ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆಯಾಗಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಯೇ ಭೂ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

ಚೆಂಬು ಪೆರಾಜೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭೂಕಂಪನವಾಗಿರುವುದರಿಂದ ಮಳೆ ನೀರು ಭೂಮಿಯೊಳಗೆ ಇಂಗಿ ಭೂಕುಸಿತ ಸಂಭವಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ಗಡಿಭಾಗದ ಜನರಲ್ಲಿ ಭೂಕಂಪನ ಸಾಕಷ್ಟು ಆತಂಕವನ್ನು ಸೃಷ್ಡಿಸಿದೆ.

ಮತ್ತೆ ಕಂಪನ: ಚೆಂಬುವಿನಲ್ಲಿ ಶನಿವಾರ ಮಧ್ಯಾಹ್ನ 1.21ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು