10:43 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸತತ ಭೂಕಂಪಕ್ಕೆ ತುತ್ತಾದ ಚೆಂಬು ಗ್ರಾಮದಲ್ಲಿ  ವರುಣನ ಆರ್ಭಟ: ಭಾರೀ ಭೂಕುಸಿತ, ಮನೆಗೆ ತೀವ್ರ ಹಾನಿ

02/07/2022, 20:38

ಮಡಿಕೇರಿ(reporterkarnataka.com): ಸತತವಾಗಿ ನಾಲ್ಕು ಬಾರಿ ಭೂಕಂಪನಕ್ಕೊಳಗಾಗಿರುವ ದ.ಕ ಹಾಗೂ ಕೊಡಗು ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಚೆಂಬು ಗ್ರಾಮದಲ್ಲಿ ಶನಿವಾರ ಭೂಕುಸಿತ ಉಂಟಾಗಿದ್ದು, ಮನೆಯೊಂದು ಜಖಂಗೊಂಡಿದೆ.

ಶನಿವಾರ ಬೆಳಗಿನ ಜಾವ 3 ಗಂಟೆಗೆ ಚೆಂಬು ಗ್ರಾಮದ ಪೂಜಾರಿಗದ್ದೆ ಗಿರಿಧರ್ ಎಂಬವರ ಮನೆಯ ಮೇಲೆ ಭಾರೀ ಶಬ್ಧದೊಂದಿಗೆ ಮಣ್ಣು ಕುಸಿದಿದ್ದು, ಮನೆಯ ಒಂದು ಭಾಗ ಜಖಂಗೊಂಡಿದೆ.

ಭಾರೀ ಮಳೆ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆಯಾಗಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಯೇ ಭೂ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

ಚೆಂಬು ಪೆರಾಜೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭೂಕಂಪನವಾಗಿರುವುದರಿಂದ ಮಳೆ ನೀರು ಭೂಮಿಯೊಳಗೆ ಇಂಗಿ ಭೂಕುಸಿತ ಸಂಭವಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ಗಡಿಭಾಗದ ಜನರಲ್ಲಿ ಭೂಕಂಪನ ಸಾಕಷ್ಟು ಆತಂಕವನ್ನು ಸೃಷ್ಡಿಸಿದೆ.

ಮತ್ತೆ ಕಂಪನ: ಚೆಂಬುವಿನಲ್ಲಿ ಶನಿವಾರ ಮಧ್ಯಾಹ್ನ 1.21ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು