6:04 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಸತತ ಭೂಕಂಪಕ್ಕೆ ತುತ್ತಾದ ಚೆಂಬು ಗ್ರಾಮದಲ್ಲಿ  ವರುಣನ ಆರ್ಭಟ: ಭಾರೀ ಭೂಕುಸಿತ, ಮನೆಗೆ ತೀವ್ರ ಹಾನಿ

02/07/2022, 20:38

ಮಡಿಕೇರಿ(reporterkarnataka.com): ಸತತವಾಗಿ ನಾಲ್ಕು ಬಾರಿ ಭೂಕಂಪನಕ್ಕೊಳಗಾಗಿರುವ ದ.ಕ ಹಾಗೂ ಕೊಡಗು ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಚೆಂಬು ಗ್ರಾಮದಲ್ಲಿ ಶನಿವಾರ ಭೂಕುಸಿತ ಉಂಟಾಗಿದ್ದು, ಮನೆಯೊಂದು ಜಖಂಗೊಂಡಿದೆ.

ಶನಿವಾರ ಬೆಳಗಿನ ಜಾವ 3 ಗಂಟೆಗೆ ಚೆಂಬು ಗ್ರಾಮದ ಪೂಜಾರಿಗದ್ದೆ ಗಿರಿಧರ್ ಎಂಬವರ ಮನೆಯ ಮೇಲೆ ಭಾರೀ ಶಬ್ಧದೊಂದಿಗೆ ಮಣ್ಣು ಕುಸಿದಿದ್ದು, ಮನೆಯ ಒಂದು ಭಾಗ ಜಖಂಗೊಂಡಿದೆ.

ಭಾರೀ ಮಳೆ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆಯಾಗಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಯೇ ಭೂ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

ಚೆಂಬು ಪೆರಾಜೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭೂಕಂಪನವಾಗಿರುವುದರಿಂದ ಮಳೆ ನೀರು ಭೂಮಿಯೊಳಗೆ ಇಂಗಿ ಭೂಕುಸಿತ ಸಂಭವಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ಗಡಿಭಾಗದ ಜನರಲ್ಲಿ ಭೂಕಂಪನ ಸಾಕಷ್ಟು ಆತಂಕವನ್ನು ಸೃಷ್ಡಿಸಿದೆ.

ಮತ್ತೆ ಕಂಪನ: ಚೆಂಬುವಿನಲ್ಲಿ ಶನಿವಾರ ಮಧ್ಯಾಹ್ನ 1.21ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು