4:23 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸತ್ತವರ ಹೆಸರಿನಲ್ಲಿಯೂ ಬಸವ ವಸತಿ ಯೋಜನೆ ಹಣ ಖಾತೆಗೆ ಜಮೆ: ಹಣ ಲಪಟಾಯಿಸಿದ ಪಿಡಿಒ ವಿರುದ್ದ ದೂರು

29/06/2024, 19:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಸವ ವಸತಿ ಯೋಜನೆ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಬಿಲ್ ಹಣ ಜಮೆ ಮಾಡಿ, ಹಣವನ್ನು ಲಪಟಾಯಿಸಿ ಅಕ್ರಮವೆಸಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ಯಲ್ಲಿ ಬೆಳಕಿಗೆ ಬಂದಿದೆ.


ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ಪಿಡಿಒ ನಿರ್ಮಲಾ ರವರು ಕಾನೂನಿಗೆ ವಿರುದ್ದವಾಗಿ ಮೃತಪಟ್ಟ ಫಲಾನುಭವಿ ಖಾತೆಗೆ 59,600/- ರೂ. ಜಮಾ ಮಾಡಿದ್ದಾರೆಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಮತ್ತು ಗಟ್ಟವಾಡಿಪುರ ಗ್ರಾಮದ ಮುಖಂಡ ರಾಜೇಶ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟವಾಡಿಪುರ ಗ್ರಾಮದ ಕೆಂಪಮ್ಮ ರವರಿಗೆ ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣ 2017-18 ನೇ ಸಾಲಿನಲ್ಲಿ ಮಂಜೂರಾಗಿದೆ. ಜಿಪಿಎಸ್ ನಂತರ 1 ಮತ್ತು 2 ನೇ ಬಿಲ್ ಅವರ ಖಾತೆಗೆ ಪಾವತಿಸಲಾಗಿದೆ. ಅನಾರೋಗ್ಯದ ನಿಮಿತ್ತ ಕೆಂಪಮ್ಮ ರವರು 9-1-2020 ರಂದು ಮೃತಪಟ್ಟಿದ್ದಾರೆ. ಹೀಗಿದ್ದರೂ ಪಿಡಿಒ ನಿರ್ಮಲಾ ರವರು ಸರ್ಟಿಫೈ ಮಾಡಿ 8-9-2023 ರಂದು ಮೃತ ಕೆಂಪಮ್ಮ ರವರ ಖಾತೆಗೆ 59,600/- ರೂಗಳನ್ನು ಕಾನೂನಿಗೆ ವಿರುದ್ದವಾಗಿ ಜಮೆ ಮಾಡಿದ್ದಾರೆ. ಆ ಹಣವನ್ನು ಬೇರೊಬ್ಬ ವ್ಯಕ್ತಿಯಿಂದ ಹಣವನ್ನು ಡ್ರಾ ಮಾಡಿಸಿ ಅಕ್ರಮವೆಸಗಿದ್ದಾರೆ. ಅಲ್ಲದೆ ಪಂಚಾಯ್ತಿ ಕಚೇರಿಯ ಸಮಯ ಹೊರತುಪಡಿಸಿ ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿರುವ ಕಂಪ್ಯೂಟರ್ ಸೆಂಟರ್ ನಲ್ಲಿ ಯಾವುದೇ ಸಭೆ ನಡಾವಳಿಗಳನ್ನು ಮಾಡದೆ ಪಂಚಾಯ್ತಿ ಲಾಗಿನ್ ಬಳಸಿಕೊಂಡು 57 ಕ್ಕೂ ಹೆಚ್ಚು ಇ- ಸ್ವತ್ತುಗಳನ್ನ ಮಾಡಿದ್ದಾರೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ. ಅಕ್ರಮ ಎಸಗಿರುವ ಪಿಡಿಒ ನಿರ್ಮಲಾ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು , ತನಿಖೆ ನಡೆಸಿ ಇಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಇಲ್ಲವಾದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮುಂದೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೈಟ್.
ನಾಗಣ್ಣ, ಮಾಜಿ ಗ್ರಾಪಂ ಸದಸ್ಯರು ದೊಡ್ಡ ಕವಲಂದೆ.

ಇತ್ತೀಚಿನ ಸುದ್ದಿ

ಜಾಹೀರಾತು