9:39 AM Monday1 - July 2024
ಬ್ರೇಕಿಂಗ್ ನ್ಯೂಸ್
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ… ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ

ಇತ್ತೀಚಿನ ಸುದ್ದಿ

ಸತ್ತವರ ಹೆಸರಿನಲ್ಲಿಯೂ ಬಸವ ವಸತಿ ಯೋಜನೆ ಹಣ ಖಾತೆಗೆ ಜಮೆ: ಹಣ ಲಪಟಾಯಿಸಿದ ಪಿಡಿಒ ವಿರುದ್ದ ದೂರು

29/06/2024, 19:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಸವ ವಸತಿ ಯೋಜನೆ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಬಿಲ್ ಹಣ ಜಮೆ ಮಾಡಿ, ಹಣವನ್ನು ಲಪಟಾಯಿಸಿ ಅಕ್ರಮವೆಸಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ಯಲ್ಲಿ ಬೆಳಕಿಗೆ ಬಂದಿದೆ.


ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ಪಿಡಿಒ ನಿರ್ಮಲಾ ರವರು ಕಾನೂನಿಗೆ ವಿರುದ್ದವಾಗಿ ಮೃತಪಟ್ಟ ಫಲಾನುಭವಿ ಖಾತೆಗೆ 59,600/- ರೂ. ಜಮಾ ಮಾಡಿದ್ದಾರೆಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಮತ್ತು ಗಟ್ಟವಾಡಿಪುರ ಗ್ರಾಮದ ಮುಖಂಡ ರಾಜೇಶ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟವಾಡಿಪುರ ಗ್ರಾಮದ ಕೆಂಪಮ್ಮ ರವರಿಗೆ ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣ 2017-18 ನೇ ಸಾಲಿನಲ್ಲಿ ಮಂಜೂರಾಗಿದೆ. ಜಿಪಿಎಸ್ ನಂತರ 1 ಮತ್ತು 2 ನೇ ಬಿಲ್ ಅವರ ಖಾತೆಗೆ ಪಾವತಿಸಲಾಗಿದೆ. ಅನಾರೋಗ್ಯದ ನಿಮಿತ್ತ ಕೆಂಪಮ್ಮ ರವರು 9-1-2020 ರಂದು ಮೃತಪಟ್ಟಿದ್ದಾರೆ. ಹೀಗಿದ್ದರೂ ಪಿಡಿಒ ನಿರ್ಮಲಾ ರವರು ಸರ್ಟಿಫೈ ಮಾಡಿ 8-9-2023 ರಂದು ಮೃತ ಕೆಂಪಮ್ಮ ರವರ ಖಾತೆಗೆ 59,600/- ರೂಗಳನ್ನು ಕಾನೂನಿಗೆ ವಿರುದ್ದವಾಗಿ ಜಮೆ ಮಾಡಿದ್ದಾರೆ. ಆ ಹಣವನ್ನು ಬೇರೊಬ್ಬ ವ್ಯಕ್ತಿಯಿಂದ ಹಣವನ್ನು ಡ್ರಾ ಮಾಡಿಸಿ ಅಕ್ರಮವೆಸಗಿದ್ದಾರೆ. ಅಲ್ಲದೆ ಪಂಚಾಯ್ತಿ ಕಚೇರಿಯ ಸಮಯ ಹೊರತುಪಡಿಸಿ ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿರುವ ಕಂಪ್ಯೂಟರ್ ಸೆಂಟರ್ ನಲ್ಲಿ ಯಾವುದೇ ಸಭೆ ನಡಾವಳಿಗಳನ್ನು ಮಾಡದೆ ಪಂಚಾಯ್ತಿ ಲಾಗಿನ್ ಬಳಸಿಕೊಂಡು 57 ಕ್ಕೂ ಹೆಚ್ಚು ಇ- ಸ್ವತ್ತುಗಳನ್ನ ಮಾಡಿದ್ದಾರೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ. ಅಕ್ರಮ ಎಸಗಿರುವ ಪಿಡಿಒ ನಿರ್ಮಲಾ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು , ತನಿಖೆ ನಡೆಸಿ ಇಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಇಲ್ಲವಾದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮುಂದೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೈಟ್.
ನಾಗಣ್ಣ, ಮಾಜಿ ಗ್ರಾಪಂ ಸದಸ್ಯರು ದೊಡ್ಡ ಕವಲಂದೆ.

ಇತ್ತೀಚಿನ ಸುದ್ದಿ

ಜಾಹೀರಾತು