11:20 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್

10/11/2022, 22:31

ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.

ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮಯ್ಯನವರು ತಿಲಕ ಧರಿಸಿದವರನ್ನು ಕಂಡರೆ ಭಯವಾಗುತ್ತದೆ ಎಂದಿದ್ದರು. ಮಾಂಸಾಹಾರ ಸೇವಿಸಿ ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ಕೊಟ್ಟಾಗಲೂ ಉಡಾಫೆಯಿಂದ ವರ್ಸಿದ್ದರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರೋಧ ವ್ಯಕ್ತಪಡಿಸುವ‌ ಕಾಂಗ್ರೆಸ್ ನಾಯಕರಿಗೆ ಒಂದು ಹಿಂದೂ ಸಮಾಜವನ್ನು ಅವಹೇಳನ ಮಾಡುವ ಚಾಳಿ ಹಿಡಿದಿದೆ. ಸತೀಶ್ ಜಾರಕಿಹೊಳಿ ಅವರು ಕೇವಲ ಕ್ಷಮೆ ಕೇಳುವುದರಿಂದ ಎಲ್ಲವೂ ಸರಿಪಡಿಸಲಾಗುವುದಿಲ್ಲ‌. ಕಾಂಗ್ರೆಸ್ ನಾಯಕರಿಗೆ ನಿಜವಾಗಿಯೂ ಹಿಂದೂ ಧರ್ಮದ ಮೇಲೆ ಗೌರವವಿದ್ದರೆ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನು ವಜಾಗೊಳಿಸಲಿ ಎಂದು ಶಾಸಕ ಕಾಮತ್ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು