5:30 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್

10/11/2022, 22:31

ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.

ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮಯ್ಯನವರು ತಿಲಕ ಧರಿಸಿದವರನ್ನು ಕಂಡರೆ ಭಯವಾಗುತ್ತದೆ ಎಂದಿದ್ದರು. ಮಾಂಸಾಹಾರ ಸೇವಿಸಿ ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ಕೊಟ್ಟಾಗಲೂ ಉಡಾಫೆಯಿಂದ ವರ್ಸಿದ್ದರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರೋಧ ವ್ಯಕ್ತಪಡಿಸುವ‌ ಕಾಂಗ್ರೆಸ್ ನಾಯಕರಿಗೆ ಒಂದು ಹಿಂದೂ ಸಮಾಜವನ್ನು ಅವಹೇಳನ ಮಾಡುವ ಚಾಳಿ ಹಿಡಿದಿದೆ. ಸತೀಶ್ ಜಾರಕಿಹೊಳಿ ಅವರು ಕೇವಲ ಕ್ಷಮೆ ಕೇಳುವುದರಿಂದ ಎಲ್ಲವೂ ಸರಿಪಡಿಸಲಾಗುವುದಿಲ್ಲ‌. ಕಾಂಗ್ರೆಸ್ ನಾಯಕರಿಗೆ ನಿಜವಾಗಿಯೂ ಹಿಂದೂ ಧರ್ಮದ ಮೇಲೆ ಗೌರವವಿದ್ದರೆ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನು ವಜಾಗೊಳಿಸಲಿ ಎಂದು ಶಾಸಕ ಕಾಮತ್ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು