1:54 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ.38.03 ಲಕ್ಷ ರೂ. ಮೌಲ್ಯದ ಆಹಾರ ಕಿಟ್, ವೈದ್ಯಕೀಯ ಪರಿಕರ, ಪಿಪಿಇ ಕಿಟ್, ಸ್ಯಾನಿಟೈಸರ್ ವಿತರಣೆ

26/06/2021, 08:11

ಮಂಗಳೂರು(reporterkarnataka news): ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ ತಿಂಗಳ ಆರಂಭದಿಂದ ಇದುವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ಕಿಟ್ ಹಾಗೂ ಉಭಯ ಜಿಲ್ಲೆಗಳಿಗೆ ವೈದ್ಯಕೀಯ ಪರಿಕರ, ಬಡವರಿಗೆ ವೈದ್ಯಕೀಯ ಚಿಕಿತ್ಸೆ ಹಾಗೂ ಮಾಸ್ಕ್, ಸ್ಯಾನಿಟೈಸರ್ , ಪಿಪಿಇ ಕಿಟ್, ಗ್ಲೌಸ್ ವಿತರಿಸಲು ಒಟ್ಟು 38.03 ಲಕ್ಷ ರೂ. ವ್ಯಯಿಸಲಾಗಿದೆ

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಉಭಯ ಜಿಲ್ಲೆಗಳ ಬಡ ಕುಟುಂಬಗಳಿಗೆ 1538 ಆಹಾರ ಕಿಟ್ ಗಳನ್ನು ವಿತರಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ 6.16 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಸೇವಾ ಭಾರತಿಗೆ 45 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್  ಮತ್ತು ಮಾಸ್ಕ್ ನೀಡಲಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಕರ್ತವ್ಯದಲ್ಲಿದ್ದ ಸುಮಾರು 100 ಮಂದಿ ಪೊಲೀಸರಿಗೆ ಟೀ ಮತ್ತು ಫಲಾಹಾರ ಒದಗಿಸಲಾಗಿದೆ. 45 ಮಂದಿ  ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಗಿದೆ. ಮಂಗಳೂರು ಟ್ರಾಫಿಕ್ ಪೊಲೀಸರಿಗೆ ಸ್ಯಾನಿಟೈಸರ್, ಫೇಸ್ ಮಾಸ್ಕ್, ಫೇಸ್ ಸೀಲ್ಡ್ ನೀಡಲಾಗಿದೆ. 18 ಮಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ 13,47,441 ರೂ. ವ್ಯಯಿಸಲಾಗಿದೆ.

ಈ ಎಲ್ಲ ಸೇವಾ ಕಾರ್ಯಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಒಟ್ಟು 38,03,412 ರೂ. ಖರ್ಚುಮಾಡಲಾಗಿದೆ.

ಈ ಎಲ್ಲ ಸೌಲಭ್ಯ ವಿತರಣೆ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು