9:32 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು