9:39 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು