3:27 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು