12:16 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು