9:26 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಸಂವಿಧಾನ ದೇಶದ ಅಡಿಪಾಯ, ಅದಕ್ಕೆ ತಾಯಿಯ ಸ್ಥಾನವಿದೆ: ಕೆನರಾ ಸಂಧ್ಯಾ ಕಾಲೇಜಿನ ಸಂವಿಧಾನ ದಿನಾಚರಣೆಯಲ್ಲಿ ಡಾ. ಅನಂತಕೃಷ್ಣ ಭಟ್

02/12/2021, 10:19

ಮಂಗಳೂರು(reporterkarnataka.com): ಸಂವಿಧಾನ ಒಂದು ದೇಶದ ಅಡಿಪಾಯವಿದ್ದಂತೆ. ಅದಕ್ಕೆ ತಾಯಿಯ ಸ್ಥಾನವಿದೆ. ಅತ್ಯಂತ ಸುದೀರ್ಘವಾದ ಕ್ರಮಬದ್ಧವಾದ ಸಂವಿಧಾನ ನಮ್ಮದು. ಸಂವಿಧಾನ ನಿಂತ ನೀರಲ್ಲ: ಹರಿಯುವ ನದಿಯಂತೆ ಅದರಲ್ಲಿ ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಾ ಹೋಗುತ್ತವೆ ಅಲ್ಲದೆ ಅದು ಜನತೆಯ ಆಶೋತ್ತರಗಳನ್ನು ಪ್ರತಿಫಲಿಸುವಂತಿರಬೇಕು ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ ಪಿ. ಅನಂತಕೃಷ್ಣ ಭಟ್ ಹೇಳಿದರು.

ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಕೆನರಾ ಸಂಧ್ಯಾ ಕಾಲೇಜು ಹಮ್ಮಿಕೊಂಡಿದ್ದ “ಭಾರತೀಯ ಸಂವಿಧಾನ ರಚನೆ: ಸ್ಥಳೀಯ ಪ್ರಸ್ತುಕತೆಯ ಬಗ್ಗೆ ಅಜ್ಞಾತ ಸಂಗತಿಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.




ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ಆದ್ಯಕ್ಷತೆ ವಹಿಸಿದ್ದರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಖಜಾಂಜಿ ಹಾಗೂ ಕಾಲೇಜಿನ ಸಂಚಾಲಕ ಸಿ ಎ ವಾಮನ ಕಾಮತ್ , ಬದಲಿ ಖಜಾಂಚಿಗಳಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ , ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ಉಪಸ್ಥಿತರಿದ್ದರು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಅನಿಲ ಸ್ವಾಗತಿಸಿದರು, ಹಿಂದಿ ಪ್ರಾಧ್ಯಾಪಕಿ ಸುಜಾತ ಜಿ ನಾಯಕ್ ಅತಿಥಿಗಳನ್ನು ಪರಿಚಯಿಸದರು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಸೀಮಾ ಪ್ರಭು ಎಸ್ ವಂದಿಸಿದರು. ಕನ್ನಡ ಪ್ರಾಧ್ಯಪಿಕೆ ವಾಣಿ ಯು ಎಸ್ ನಿರೂಪಿಸಿದರು. ಉಷಾ ನಾಯಕ್ ಹಾಗೂ ಸುಜಾತಾ ಜಿ ನಾಯಕ್ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು