4:38 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

Scanning Center | ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆ: ಕೋಲಾರ ಹೋಪ್ ಆಸ್ಪತ್ರೆಯ ಸ್ಕ್ಯಾನಿಂಗ್ ಕೇಂದ್ರ ಸೀಸ್

12/12/2023, 22:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ರಾಜ್ಯಾದ್ಯಂತ ಆವರಿಸಿರುವ ಭ್ರೂಣಹತ್ಯೆ ಹಾಗೂ ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆಯ ಈ ಸಮಯದಲ್ಲಿ, ಉಲ್ಲಂಘನೆಯಾಗಿರುವ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಸಕ್ಷಮ ಪ್ರಾಧಿಕಾರ ಪ್ರತ್ಯಾಯೋಜಿಸಿದ ಅಧಿಕಾರದ ಮೇರೆಗೆ ಪಿ.ಸಿ.&ಪಿ.ಎನ್.ಡಿ.ಟಿ. ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಜಿಲ್ಲಾ ತಪಸಣಾ ಮತ್ತು ಮೇಲ್ವಿಚಾರಣೆ ತಂಡವು ಜಿಲ್ಲೆಯಾದ್ಯಂತ ಇರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಪರಿಶೀಲನೆಗಾಗಿ ಭೇಟಿ ನೀಡುತ್ತಿದ್ದು .

ಅದರಂತೆ ಪಿ.ಸಿ.&ಪಿ.ಎನ್.ಡಿ.ಟಿ. ಕಾಯ್ದೆನ್ವಯ ಪರಿಶೀಲನೆಗಾಗಿ ಕೋಲಾರ ನಗರದ ಕುರುಬರಪೇಟೆಯಲ್ಲಿರುವ Hope Health Care ಗೆ ಭೇಟಿ ನೀಡಿದ್ದು, ಈ ಆರೋಗ್ಯ ಸಂಸ್ಥೆಯ ಸ್ಕ್ಯಾನಿಂಗ್ ಕೇಂದ್ರದಲ್ಲಿ ನೋಂದಾಯಿತ ವೈದ್ಯರಾದ ಡಾ. ಡೈಸಿ ಯಶವಂತ್ ಅವರು ಸ್ಕ್ಯಾನಿಂಗ್ ಕಾರ್ಯವನ್ನು ನಿರ್ವಹಿಸದೇ ಅವರ ಅನುಪಸ್ಥಿತಿಯಲ್ಲಿ ಅರ್ಹರಲ್ಲದ ಶುಕ್ರೂಷಕಿ ವಿಜಯಲಕ್ಷ್ಮಿ ಮತ್ತು ಸ್ಕ್ಯಾನಿಂಗ್ ಮಾಡಲು ಅರ್ಹರಲ್ಲದ ವೈದ್ಯರಾದ ಡಾ. ಯಶವಂತ್ ವಿಟ್ಲರವರು ಸ್ಕ್ಯಾನಿಂಗ್ ಮಾಡುತ್ತಿರುವುದು ಹಾಗೂ ದಾಖಲೆಗಳನ್ನು ನಿರ್ವಹಿಸದೇ ಇರುವುದು ಕಂಡು ಬಂದಿದ್ದು. ಈ ಕೇಂದ್ರವನ್ನು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ತಪಾಸಣೆ ಮತ್ತು ಮೇಲ್ವಿಚಾರಣ ಸಮಿತಿಯ ಅಧ್ಯಕ್ಷರಾದ ಡಾ. ಚಂದನ್ ಕುಮಾರ್.ಎಸ್. ಹಾಗೂ ಸಮಿತಿಯ ಸದಸ್ಯರುಗಳಾದ ಎಸ್.ಎನ್.ಆರ್. ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ. ರವೀಂದ್ರ ನಾಯಕ್, ಡಾ. ರಾಜೇಂದ್ರ ಹಾಗೂ ಎನ್.ಜಿ.ಓ ರುದ್ರೇಶ್ ಹುನ್ಸಾಳ್, ಭೇಟಿ ನೀಡಿದ ಸಂದರ್ಭದಲ್ಲಿ ಸ್ಕ್ಯಾನಿಂಗ್ ಕೇಂದ್ರದಲ್ಲಿ ಪಿಸಿಪಿಎನ್ ಡಿಟಿ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು,ಈ ಸ್ಕ್ಯಾನಿಂಗ್ ಕೇಂದ್ರವನ್ನು ಪಂಚರ ಸಮಕ್ಷಮದಲ್ಲಿ, ಪಂಚನಾಮೆಯೊಂದಿಗೆ ಸೀಸ್ ಮಾಡಿ ಸ್ಥಳ ನೋಟಿಸ್ ಜಾರಿ ಮಾಡಲಾಗಿರುತ್ತದೆ.


ಈ ಸಮಯದಲ್ಲಿ ವಿಷಯ ನಿರ್ವಾಹಕರಾದ ಜಯಚಂದ್ರ ಎಸ್, ಕೀರ್ತಿ ಸಿ.ವಿ., ಚೇತನ್ ಹಾಗೂ ವಾಹನ ಚಾಲಕ ಸರವಣ ಉಪಸ್ಥಿತಿಯಲ್ಲಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು