2:02 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Scanning Center | ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆ: ಕೋಲಾರ ಹೋಪ್ ಆಸ್ಪತ್ರೆಯ ಸ್ಕ್ಯಾನಿಂಗ್ ಕೇಂದ್ರ ಸೀಸ್

12/12/2023, 22:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ರಾಜ್ಯಾದ್ಯಂತ ಆವರಿಸಿರುವ ಭ್ರೂಣಹತ್ಯೆ ಹಾಗೂ ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆಯ ಈ ಸಮಯದಲ್ಲಿ, ಉಲ್ಲಂಘನೆಯಾಗಿರುವ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಸಕ್ಷಮ ಪ್ರಾಧಿಕಾರ ಪ್ರತ್ಯಾಯೋಜಿಸಿದ ಅಧಿಕಾರದ ಮೇರೆಗೆ ಪಿ.ಸಿ.&ಪಿ.ಎನ್.ಡಿ.ಟಿ. ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಜಿಲ್ಲಾ ತಪಸಣಾ ಮತ್ತು ಮೇಲ್ವಿಚಾರಣೆ ತಂಡವು ಜಿಲ್ಲೆಯಾದ್ಯಂತ ಇರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಪರಿಶೀಲನೆಗಾಗಿ ಭೇಟಿ ನೀಡುತ್ತಿದ್ದು .

ಅದರಂತೆ ಪಿ.ಸಿ.&ಪಿ.ಎನ್.ಡಿ.ಟಿ. ಕಾಯ್ದೆನ್ವಯ ಪರಿಶೀಲನೆಗಾಗಿ ಕೋಲಾರ ನಗರದ ಕುರುಬರಪೇಟೆಯಲ್ಲಿರುವ Hope Health Care ಗೆ ಭೇಟಿ ನೀಡಿದ್ದು, ಈ ಆರೋಗ್ಯ ಸಂಸ್ಥೆಯ ಸ್ಕ್ಯಾನಿಂಗ್ ಕೇಂದ್ರದಲ್ಲಿ ನೋಂದಾಯಿತ ವೈದ್ಯರಾದ ಡಾ. ಡೈಸಿ ಯಶವಂತ್ ಅವರು ಸ್ಕ್ಯಾನಿಂಗ್ ಕಾರ್ಯವನ್ನು ನಿರ್ವಹಿಸದೇ ಅವರ ಅನುಪಸ್ಥಿತಿಯಲ್ಲಿ ಅರ್ಹರಲ್ಲದ ಶುಕ್ರೂಷಕಿ ವಿಜಯಲಕ್ಷ್ಮಿ ಮತ್ತು ಸ್ಕ್ಯಾನಿಂಗ್ ಮಾಡಲು ಅರ್ಹರಲ್ಲದ ವೈದ್ಯರಾದ ಡಾ. ಯಶವಂತ್ ವಿಟ್ಲರವರು ಸ್ಕ್ಯಾನಿಂಗ್ ಮಾಡುತ್ತಿರುವುದು ಹಾಗೂ ದಾಖಲೆಗಳನ್ನು ನಿರ್ವಹಿಸದೇ ಇರುವುದು ಕಂಡು ಬಂದಿದ್ದು. ಈ ಕೇಂದ್ರವನ್ನು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ತಪಾಸಣೆ ಮತ್ತು ಮೇಲ್ವಿಚಾರಣ ಸಮಿತಿಯ ಅಧ್ಯಕ್ಷರಾದ ಡಾ. ಚಂದನ್ ಕುಮಾರ್.ಎಸ್. ಹಾಗೂ ಸಮಿತಿಯ ಸದಸ್ಯರುಗಳಾದ ಎಸ್.ಎನ್.ಆರ್. ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ. ರವೀಂದ್ರ ನಾಯಕ್, ಡಾ. ರಾಜೇಂದ್ರ ಹಾಗೂ ಎನ್.ಜಿ.ಓ ರುದ್ರೇಶ್ ಹುನ್ಸಾಳ್, ಭೇಟಿ ನೀಡಿದ ಸಂದರ್ಭದಲ್ಲಿ ಸ್ಕ್ಯಾನಿಂಗ್ ಕೇಂದ್ರದಲ್ಲಿ ಪಿಸಿಪಿಎನ್ ಡಿಟಿ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು,ಈ ಸ್ಕ್ಯಾನಿಂಗ್ ಕೇಂದ್ರವನ್ನು ಪಂಚರ ಸಮಕ್ಷಮದಲ್ಲಿ, ಪಂಚನಾಮೆಯೊಂದಿಗೆ ಸೀಸ್ ಮಾಡಿ ಸ್ಥಳ ನೋಟಿಸ್ ಜಾರಿ ಮಾಡಲಾಗಿರುತ್ತದೆ.


ಈ ಸಮಯದಲ್ಲಿ ವಿಷಯ ನಿರ್ವಾಹಕರಾದ ಜಯಚಂದ್ರ ಎಸ್, ಕೀರ್ತಿ ಸಿ.ವಿ., ಚೇತನ್ ಹಾಗೂ ವಾಹನ ಚಾಲಕ ಸರವಣ ಉಪಸ್ಥಿತಿಯಲ್ಲಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು