4:43 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ‌ ಕಾರ್ಯಾಚರಣೆ; ನೋಡಲು ಜನಜಾತ್ರೆ!

22/09/2024, 00:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು.


ಶುಕ್ರವಾರ ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಬಂದ ಸ್ನೇಕ್ ಆರೀಫ್ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ 15 ಅಡಿ ಉದ್ದ ಕಾಳಿಂಗ ಸರ್ಪ ಸೆರೆ ಹಿಡಿದರು. ಶಾಲೆಯ ಮಕ್ಕಳಿದ್ದ ಸಮಯದಲ್ಲಿ ಕಾಳಿಂಗ ಸರ್ಪ ಯಾರಿಗೂ ಕಾಣಿಸದ ಕಾರಣ ದೊಡ್ಡ ಅಪಾಯ ಸಂಭವಿಸುವುದು ತಪ್ಪಿದಂತಾಗಿದೆ. ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆ ವೇಳೆ ನೂರಾರು ಮಂದಿ ಜಮಾಯಿಸಿ ಕಾಳಿಂಗ ಸರ್ಪವನ್ನು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು