9:23 PM Thursday14 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ…

ಇತ್ತೀಚಿನ ಸುದ್ದಿ

ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ‌ ಕಾರ್ಯಾಚರಣೆ; ನೋಡಲು ಜನಜಾತ್ರೆ!

22/09/2024, 00:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು.


ಶುಕ್ರವಾರ ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಬಂದ ಸ್ನೇಕ್ ಆರೀಫ್ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ 15 ಅಡಿ ಉದ್ದ ಕಾಳಿಂಗ ಸರ್ಪ ಸೆರೆ ಹಿಡಿದರು. ಶಾಲೆಯ ಮಕ್ಕಳಿದ್ದ ಸಮಯದಲ್ಲಿ ಕಾಳಿಂಗ ಸರ್ಪ ಯಾರಿಗೂ ಕಾಣಿಸದ ಕಾರಣ ದೊಡ್ಡ ಅಪಾಯ ಸಂಭವಿಸುವುದು ತಪ್ಪಿದಂತಾಗಿದೆ. ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆ ವೇಳೆ ನೂರಾರು ಮಂದಿ ಜಮಾಯಿಸಿ ಕಾಳಿಂಗ ಸರ್ಪವನ್ನು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು