4:54 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ‌ ಕಾರ್ಯಾಚರಣೆ; ನೋಡಲು ಜನಜಾತ್ರೆ!

22/09/2024, 00:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು.


ಶುಕ್ರವಾರ ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಬಂದ ಸ್ನೇಕ್ ಆರೀಫ್ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ 15 ಅಡಿ ಉದ್ದ ಕಾಳಿಂಗ ಸರ್ಪ ಸೆರೆ ಹಿಡಿದರು. ಶಾಲೆಯ ಮಕ್ಕಳಿದ್ದ ಸಮಯದಲ್ಲಿ ಕಾಳಿಂಗ ಸರ್ಪ ಯಾರಿಗೂ ಕಾಣಿಸದ ಕಾರಣ ದೊಡ್ಡ ಅಪಾಯ ಸಂಭವಿಸುವುದು ತಪ್ಪಿದಂತಾಗಿದೆ. ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆ ವೇಳೆ ನೂರಾರು ಮಂದಿ ಜಮಾಯಿಸಿ ಕಾಳಿಂಗ ಸರ್ಪವನ್ನು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು