8:34 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ‌ ಕಾರ್ಯಾಚರಣೆ; ನೋಡಲು ಜನಜಾತ್ರೆ!

22/09/2024, 00:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು.


ಶುಕ್ರವಾರ ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಬಂದ ಸ್ನೇಕ್ ಆರೀಫ್ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ 15 ಅಡಿ ಉದ್ದ ಕಾಳಿಂಗ ಸರ್ಪ ಸೆರೆ ಹಿಡಿದರು. ಶಾಲೆಯ ಮಕ್ಕಳಿದ್ದ ಸಮಯದಲ್ಲಿ ಕಾಳಿಂಗ ಸರ್ಪ ಯಾರಿಗೂ ಕಾಣಿಸದ ಕಾರಣ ದೊಡ್ಡ ಅಪಾಯ ಸಂಭವಿಸುವುದು ತಪ್ಪಿದಂತಾಗಿದೆ. ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆ ವೇಳೆ ನೂರಾರು ಮಂದಿ ಜಮಾಯಿಸಿ ಕಾಳಿಂಗ ಸರ್ಪವನ್ನು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು