2:14 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಎಸ್ ಸಿಐ ‘ಬಂಟ್ವಾಳ ನೇತ್ರಾವತಿ ಸಂಗಮ’ ಉದ್ಘಾಟನೆ: ನೂತನ ಅಧ್ಯಕ್ಷ ಜಯಾನಂದ ಪೆರಾಜೆ 

10/03/2022, 20:01

ಬಂಟ್ವಾಳ(reporterkarnataka.com):
ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ‘ಬಂಟ್ವಾಳ ನೇತ್ರಾವತಿ ಸಂಗಮ’ ಲೀಜನ್ ನ ನೂತನ ಪದಗ್ರಹಣ ಸಮಾರಂಭ ಇತ್ತೀಚೆಗೆ ಬಿ.ಸಿ. ರೋಡ್ ನ ಪದ್ಮ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷ ಡಾ. ಕೇದಿಗೆ ಅರವಿಂದ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ಈ ಕಾರ್ಯಕ್ರಮವು ಹೆಸರಿಗೆ ತಕ್ಕ ಹಾಗೆ ನೇತ್ರಾವತಿ ಸಂಗಮದಂತೆ ಮೂಡಿದೆ ಎಂದು ನುಡಿದರು. ಅತಿಥಿಗಳಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಜಿ.ಎಂಡ್ ಡಿ ಹಾಗೂ ಉಡುಪಿ ಟೆಂಪಲ್ ಸಿಟಿ ಲೀಜನ್ ನ ಚಿತ್ರ ಕುಮಾರ್ ಹಾಗೂ ಜಿ.ಎಂಡ್ ಜಿ   ನವೀನ್ ಅಮೀನ್ ಉಪಸ್ಥಿತರಿದ್ದರು. 


ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಅಧಿಕಾರಿ ಜಯಪ್ರಕಾಶ್ ರಾವ್, ಎಸ್.ವಿ.ಎಸ್ ಕಾಲೇಜ್ ನ ನಿವೃತ್ತ ಪ್ರೊಫೆಸರ್ ವೃಷಭನಾಥ್ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ‘ಬಂಟ್ವಾಳ ನೇತ್ರಾವತಿ ಸಂಗಮ’ ಲೀಜನ್ ನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾದರು. ಕಾರ್ಯದರ್ಶಿಯಾಗಿ  ಬಿ.ಸತ್ಯನಾರಾಯಣ, ಖಜಾಂಚಿಯಾಗಿ ರಾಮಚಂದ್ರ ಭಟ್ ಬಿ. ಅವರನ್ನು ಆಯ್ಕೆ ಮಾಡಲಾಯಿತು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್  ಮಂಗಳೂರು ಲೀಜನ್ ಅಧ್ಯಕ್ಷ ಹರಿಪ್ರಸಾದ್ ಕಾರಮೊಗರಗುತ್ತು ಜಯಾನಂದ ಪೆರಾಜೆಯವರಿಗೆ ಪ್ರಮಾಣ ವಚನ ಬೋಧಿಸಿದರು. ಉಳಿದ ಪದಾಧಿಕಾರಿಗಳು ಜಿ.ಎಂಡ್ ಡಿ ಚಿತ್ರಕುಮಾರ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಎಸ್.ಸಿ.ಐ ನ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಕೇದಿಗೆ ಅರವಿಂದ್ ರಾವ್ ಅವರ ಕಿರು ಪರಿಚಯ ಮಾಡಿದರೆ, ಎಸ್.ಸಿ.ಐನ ಉಡುಪಿ ಲೀಜನ್ ನ ಚಿತ್ರಕುಮಾರ್ ಹಾಗೂ ನವೀನ್ ಅಮೀನ್ ಅವರುಗಳ ಕಿರುಪರಿಚಯವನ್ನು ಕ್ರಮವಾಗಿ  ಮಂಗಳೂರು ಲೀಜನ್ ನ ಸದಸ್ಯೆಯರಾದ ಲತಾ ಕಲ್ಲಡ್ಕ ಹಾಗೂ ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೋ ಮಾಡಿದರು. ಕಾರ್ಯಕ್ರಮದಲ್ಲಿ  ಬಂಟ್ವಾಳ ನೇತ್ರಾವತಿ ಲೀಜನ್ ನ ಸದಸ್ಯರಾದ  ಪಿ.ಎ. ರಹೀಂ, ಸುಲೈಮಾನ್ ಬಂಟ್ವಾಳ, ಮಹಮ್ಮದ್, ಪಿಂಕಿ ಸ್ಟುಡಿಯೊ ಮಾಲಕರು, ವಕೀಲೆ ಗಾಯತ್ರಿ, ಎಸ್.ಸಿ.ಐನ ಸದಾನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು. ಮಂಗಳೂರು ಲೀಜನ್ ಅಧ್ಯಕ್ಷ ಹರಿಪ್ರಸಾದ್ ಕಾರಮೊಗರುಗುತ್ತು ಸ್ವಾಗತಿಸಿದರು. ಬಂಟ್ವಾಳ ಲೀಜನ್ ನ ಖಜಾಂಚಿ ರಾಮಚಂದ್ರ ಭಟ್ ಬಿ. ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಅಹ್ಮದ್ ಮುಸ್ತಾಫ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು