7:21 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಸ್ ಸಿಐ ‘ಬಂಟ್ವಾಳ ನೇತ್ರಾವತಿ ಸಂಗಮ’ ಉದ್ಘಾಟನೆ: ನೂತನ ಅಧ್ಯಕ್ಷ ಜಯಾನಂದ ಪೆರಾಜೆ 

10/03/2022, 20:01

ಬಂಟ್ವಾಳ(reporterkarnataka.com):
ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ‘ಬಂಟ್ವಾಳ ನೇತ್ರಾವತಿ ಸಂಗಮ’ ಲೀಜನ್ ನ ನೂತನ ಪದಗ್ರಹಣ ಸಮಾರಂಭ ಇತ್ತೀಚೆಗೆ ಬಿ.ಸಿ. ರೋಡ್ ನ ಪದ್ಮ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷ ಡಾ. ಕೇದಿಗೆ ಅರವಿಂದ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ಈ ಕಾರ್ಯಕ್ರಮವು ಹೆಸರಿಗೆ ತಕ್ಕ ಹಾಗೆ ನೇತ್ರಾವತಿ ಸಂಗಮದಂತೆ ಮೂಡಿದೆ ಎಂದು ನುಡಿದರು. ಅತಿಥಿಗಳಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಜಿ.ಎಂಡ್ ಡಿ ಹಾಗೂ ಉಡುಪಿ ಟೆಂಪಲ್ ಸಿಟಿ ಲೀಜನ್ ನ ಚಿತ್ರ ಕುಮಾರ್ ಹಾಗೂ ಜಿ.ಎಂಡ್ ಜಿ   ನವೀನ್ ಅಮೀನ್ ಉಪಸ್ಥಿತರಿದ್ದರು. 


ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಅಧಿಕಾರಿ ಜಯಪ್ರಕಾಶ್ ರಾವ್, ಎಸ್.ವಿ.ಎಸ್ ಕಾಲೇಜ್ ನ ನಿವೃತ್ತ ಪ್ರೊಫೆಸರ್ ವೃಷಭನಾಥ್ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ‘ಬಂಟ್ವಾಳ ನೇತ್ರಾವತಿ ಸಂಗಮ’ ಲೀಜನ್ ನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾದರು. ಕಾರ್ಯದರ್ಶಿಯಾಗಿ  ಬಿ.ಸತ್ಯನಾರಾಯಣ, ಖಜಾಂಚಿಯಾಗಿ ರಾಮಚಂದ್ರ ಭಟ್ ಬಿ. ಅವರನ್ನು ಆಯ್ಕೆ ಮಾಡಲಾಯಿತು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್  ಮಂಗಳೂರು ಲೀಜನ್ ಅಧ್ಯಕ್ಷ ಹರಿಪ್ರಸಾದ್ ಕಾರಮೊಗರಗುತ್ತು ಜಯಾನಂದ ಪೆರಾಜೆಯವರಿಗೆ ಪ್ರಮಾಣ ವಚನ ಬೋಧಿಸಿದರು. ಉಳಿದ ಪದಾಧಿಕಾರಿಗಳು ಜಿ.ಎಂಡ್ ಡಿ ಚಿತ್ರಕುಮಾರ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಎಸ್.ಸಿ.ಐ ನ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಕೇದಿಗೆ ಅರವಿಂದ್ ರಾವ್ ಅವರ ಕಿರು ಪರಿಚಯ ಮಾಡಿದರೆ, ಎಸ್.ಸಿ.ಐನ ಉಡುಪಿ ಲೀಜನ್ ನ ಚಿತ್ರಕುಮಾರ್ ಹಾಗೂ ನವೀನ್ ಅಮೀನ್ ಅವರುಗಳ ಕಿರುಪರಿಚಯವನ್ನು ಕ್ರಮವಾಗಿ  ಮಂಗಳೂರು ಲೀಜನ್ ನ ಸದಸ್ಯೆಯರಾದ ಲತಾ ಕಲ್ಲಡ್ಕ ಹಾಗೂ ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೋ ಮಾಡಿದರು. ಕಾರ್ಯಕ್ರಮದಲ್ಲಿ  ಬಂಟ್ವಾಳ ನೇತ್ರಾವತಿ ಲೀಜನ್ ನ ಸದಸ್ಯರಾದ  ಪಿ.ಎ. ರಹೀಂ, ಸುಲೈಮಾನ್ ಬಂಟ್ವಾಳ, ಮಹಮ್ಮದ್, ಪಿಂಕಿ ಸ್ಟುಡಿಯೊ ಮಾಲಕರು, ವಕೀಲೆ ಗಾಯತ್ರಿ, ಎಸ್.ಸಿ.ಐನ ಸದಾನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು. ಮಂಗಳೂರು ಲೀಜನ್ ಅಧ್ಯಕ್ಷ ಹರಿಪ್ರಸಾದ್ ಕಾರಮೊಗರುಗುತ್ತು ಸ್ವಾಗತಿಸಿದರು. ಬಂಟ್ವಾಳ ಲೀಜನ್ ನ ಖಜಾಂಚಿ ರಾಮಚಂದ್ರ ಭಟ್ ಬಿ. ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಅಹ್ಮದ್ ಮುಸ್ತಾಫ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು