11:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎಸ್ ಸಿಐ ವತಿಯಿಂದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

08/06/2022, 08:46

ಮಂಗಳೂರು(reporterkarnataka.com):  ಸೀನಿಯರ್  ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕಾವೂರು ಅಂಬಿಕಾ ನಗರದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್‌ನಲ್ಲಿ ಭಾನುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. 

ಕಾರ್ಯಕ್ರಮವನ್ನು ರಾಜಾರಾಮ ಶೆಟ್ಟಿಯವರ ತಂದೆ 97ರ ಹರೆಯದ ಕೆ. ಕೆ.ಶೆಟ್ಟಿ ಅವರು ಗಿಡವನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಸಂಯೋಜಕ ಜಿ ಮತ್ತು ಡಿ ಕರ್ನಾಟಕ, ಜಿ ಕೆ ಹರಿಪ್ರಸಾದ್ ರೈ ಉಪಸ್ಥಿತಿಯಲ್ಲಿ ಎಸ್‌ಸಿಐ ಮಂಗಳೂರು ಲೀಜನ್ ಅಧ್ಯಕ್ಷ ಎಸ್.ಎನ್.ಕಿಶೋರ್ ಫೆರ್ನಾಂಡಿಸ್ ಅವರಿಗೆ  ಗಿಡವನ್ನು ಹಸ್ತಾಂತರಿಸಲಾಯಿತು. ಅವರು ಪ್ರಕೃತಿಯ ಮಹತ್ವವನ್ನು ವಿವರಿಸಿದರು ಮತ್ತು ಭೂಮಿ ತಾಯಿಯನ್ನು ಉಳಿಸಲು ಸದಸ್ಯರಿಗೆ ಕರೆ ನೀಡಿದರು. 


ಈ ಸಂದರ್ಭದಲ್ಲಿ ವಿವಿಧ ತಳಿಯ 50 ಗಿಡಗಳನ್ನು ನೆಡಲಾಯಿತು. ಲೀಜನ್ ಐಪಿಪಿ, ಎಸ್ ಎನ್ ಆರ್ ಜಿ ಕೆ ಹರಿಪ್ರಸಾದ್ ರೈ, ಅಧ್ಯಕ್ಷ ಕಿಶೋರ್ ಫೆರ್ನಾಂಡಿಸ್ , ಕಾರ್ಯದರ್ಶಿ ಎಸ್ ಎನ್ ಆರ್ ಫ್ಲಾವಿ ಡಿಮೆಲ್ಲೊ, ಜಂಟಿ ಕಾರ್ಯದರ್ಶಿ ಹಾಗೂ ಪಿ ಆರ್ ಓ ಲತಾ ಕಲ್ಲಡ್ಕ, ಸದಸ್ಯರಾದ ಎಸ್. ಎನ್. ಆರ್. ದತ್ತಾತ್ರೇಯ, ರಾಜಾರಾಂ ಶೆಟ್ಟಿ ಹಾಗೂ ಇತರ ಸದಸ್ಯರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು