8:49 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸ್ಕೂಟರ್ ನಲ್ಲಿ ಡ್ರಗ್ಸ್ ಮಾರಾಟ: 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶ; ಓರ್ವನ ಬಂಧನ

05/08/2022, 20:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಠಾಣಾ ವ್ಯಾಪ್ತಿಯ ವಳಗೆರನಹಳ್ಳಿಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಂದ ಸುಮಾರು 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಅಕ್ರಮವಾಗಿ ಗಾಂಜವನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕೋಲಾರ ನಗರದ ಟವರ್‌ ವಾಸಿಯಾದ ನೂರ್‌ಪಾಷ  (50 ) ಎಂಬಾತನನ್ನು ಬಂಧಿಸಿ 21 ಕೆಜಿ ತೂಕದ ಸುಮಾರು 10. 50 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು ಶ್ರೀನಿವಾಸಪರ ಠಾಣೆಯಲ್ಲಿ ಎನ್‌ಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸ್ ನಿರೀಕ್ಷಕ ಜಿ.ಸಿ.ನಾರಾಯಣಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ . ಈ ದಾಳಿಯನ್ನು ಜಿಲ್ಲಾ ರಕ್ಷಾಣಧಿಕಾರಿಗಳ ಡಿ.ದೇವರಾಜ್ , ಪೊಲೀಸ್ ಅಧೀಕ್ಷಕ ಸಚಿನ್ ಪಿ . ಘೋರ್ಪಡೆ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಪಿ.ಮುರಳಿಧರ್ ಮುಂದಾಳತ್ವದಲ್ಲಿ ಅಪರಾದ ವಿಭಾಗದ ಎಎಸ್‌ಐ ಅಮೀದ್‌ಖಾನ್ ಹಾಗೂ ಸಿಬ್ಬಂದಿಗಳಾದ ರಾಮಚಂದ್ರ , ಮಂಜುನಾಥ್ , ಸುರೇಶ್ , ವೆಂಕಟಾಚಲಪತಿ , ಷಫೀವುಲ್ಲಾ , ಸಂದೀಪ್ , ರಿಜ್ವಾನ್ , ಸುಬಾನ್ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು .

 

ಇತ್ತೀಚಿನ ಸುದ್ದಿ

ಜಾಹೀರಾತು