ಇತ್ತೀಚಿನ ಸುದ್ದಿ
SDPI | ಬ್ರಹ್ಮರಕೊಟ್ಲು ಟೋಲ್ಗೇಟ್ ತೆರವುಗೊಳಿಸಲು ಆಗ್ರಹಿ ಎಸ್ಡಿಪಿಐ ಧರಣಿ: ಕ್ರೈಸ್ತ ಧರ್ಮಗುರು ಫಾ. ಜೆರಾಲ್ಡ್ ಸಿಕ್ವೇರಾ ಚಾಲನೆ
26/02/2025, 15:24

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com
ವಿವಾದಿತ ಬ್ರಹ್ಮರಕೊಟ್ಲು ಟೋಲ್ಗೇಟ್ ತೆರವುಗೊಳಿಸಲು ಆಗ್ರಹಿಸಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬ್ರಹ್ಮರಕೊಟ್ಲು ಟೋಲ್ಗೇಟ್ ಬಳಿ ಧರಣಿ ಸತ್ಯಾಗ್ರಹದ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಮುಂದುವರಿಸಿದೆ.
ನ್ಯಾಯವಾದಿಗಳು ಹಾಗೂ ಕ್ರೈಸ್ತ ಧರ್ಮ ಗುರುಗಳಾದ ಜೆರಾಲ್ಡ್ ಸಿಕ್ವೇರಾ ಅವರು ಬ್ಯಾಂಡ್ ಬಾರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು.
ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ, ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮುಖ್ಯ ಭಾಷಣಗೈದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಆಲ್ಫೋನ್ಸ್ ಫ್ರಾಂಕೋ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹಾಗೂ ಇತರ ಜಿಲ್ಲಾ ನಾಯಕರು, ಕಾರ್ಯಕರ್ತರು, ಹಲವು ಸಾಮಾಜಿಕ ಹೋರಾಟಗಾರರು, ನಿತ್ಯ ಸವಾರ ವಾಹನ ಚಾಲಕ ಮಾಲಕರು ಸಹಿತ ಹಲವರಿದ್ದರು.