7:19 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಎಸ್ ಡಿಪಿಐ ಕಚೇರಿಗೆ ಬೀಗ: ದ.ಕ. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಗೆ ಹೈಕೋರ್ಟ್ ನೋಟಿಸ್

24/11/2022, 10:59

ಬೆಂಗಳೂರು(reporter Karnataka.com): ಎಸ್ ಡಿಪಿಐ ಕಚೇರಿಗೆ ಬೀಗ ಮುದ್ರೆ ಹಾಕಿ ಜಫ್ತಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್‌ ಕಮಿಷನರ್ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗೆ ರಾಜ್ಯ ಹೈಕೋರ್ಟ್ ನೋಟಿಸ್‌ ಜಾರಿ ಮಾಡಲಾಗಿದೆ‌.

ಈ ಕುರಿತ ಕ್ರಮವನ್ನು ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಈ ನೊಟೀಸ್ ಜಾರಿಗೊಳಿಸಿದೆ.

ಕಚೇರಿ ತೆರವುಗೊಳಿಸಲು ನಿರ್ದೇಶಿಸಲು ಕೋರಿ ಎಸ್‌ಡಿಪಿಐನ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಎಸ್ ಡಿಪಿಐ ಪಕ್ಷವನ್ನು ನಿಷೇಧ ಮಾಡಲಾಗಿಲ್ಲ. ಎಸ್ ಡಿಪಿಐಗೆ ಸೇರಿದ ಕಚೇರಿಗೆ ಅಕ್ರಮವಾಗಿ ದಾಳಿ ನಡೆಸಿ, ಜಪ್ತಿ ಮಾಡಿದ್ದಾರೆ. ಎಸ್’ಡಿಪಿಐಗೆ ಸೇರಿದ ಕಚೇರಿಗಳನ್ನು ಮುಚ್ಚಿರುವುದನ್ನು ತೆರವು ಮಾಡುವಂತೆ ಪ್ರತಿವಾದಿಗಳಿಗೆ ಎಸ್’ಡಿಪಿಐ 2022ರ ಅಕ್ಟೋಬರ್‌ 29ರಂದು ಮನವಿ ಸಲ್ಲಿಸಿದ್ದರು. ಆದರೂ ತೆರವು ಮಾಡಿಲ್ಲ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ.
ಎಸ್ ಡಿಪಿಐ ಕಚೇರಿ ಜೊತೆ ಮಾಹಿತಿ ಮತ್ತು ಸೇವಾ ಕೇಂದ್ರಗಳನ್ನು ಕೂಡ ಮುಚ್ಚಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಇರುವ ಎಸ್’ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಯನ್ನು ಮುಚ್ಚಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು