ಇತ್ತೀಚಿನ ಸುದ್ದಿ
ಎಸ್ ಡಿಪಿಐ, ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗುತ್ತಾ?: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?
22/09/2022, 15:49

ಬೆಂಗಳೂರು(reporterkarnataka.com): ಎಸ್ ಡಿಪಿಐ ಮತ್ತು ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗಲಿದೆಯೇ..? ಅಂತಹದೊಂದು ಸೂಚನೆ ಬರಲಾರಂಭಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ .
ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್ ಡಿಪಿಐ ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ( ಪಿಎಫ್ ಐ) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಈಗ ಪ್ರತಿಕ್ರಿಯೆ ನೀಡಿದ್ದಾರೆ.
ಎಸ್ ಡಿಪಿಐ ಮತ್ತು ಪಿಎಫ್ ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘಟನೆಗಳನ್ನು ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದವರು ಹೇಳಿದರು.
ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ. ದೇಶವ್ಯಾಪಿ ಈ ದಾಳಿ ನಡೆಯುತ್ತಿದೆ ಎಂದು ಗೃಹ ಸಚಿವರು ನುಡಿದರು.