7:49 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ !

09/12/2021, 18:55

ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ.

ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆಯಾಗಿದ್ದರು. ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮರಣವನ್ನಪ್ಪಿದ  

ಹರ್ಜಿಂದರ್ ಸಿಂಗ್ ಅವರು ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಪ್ರೇಮ ವಿವಾಹ ಆಗಿದ್ದರು.

ಕಾರ್ಕಳ ಸಾಲ್ಮರದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಪುತ್ರಿಯಾದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸದ್ಯ ಸೇನೆಯಲ್ಲಿ ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು. ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದಲ್ಲಿಯೇ ವಾಸವಿದ್ದಾರೆ. ನಿನ್ನೆ

ಹೆಲಿಕಾಪ್ಟರ್ ದುರಂತ ವಿಷಯ ತಿಳಿಯುತ್ತಿದ್ದಂತೆ, ಮನೆಯಲ್ಲಿ ಸ್ಮಶಾನ ಮೌನ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು