12:42 PM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ !

09/12/2021, 18:55

ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ.

ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆಯಾಗಿದ್ದರು. ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮರಣವನ್ನಪ್ಪಿದ  

ಹರ್ಜಿಂದರ್ ಸಿಂಗ್ ಅವರು ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಪ್ರೇಮ ವಿವಾಹ ಆಗಿದ್ದರು.

ಕಾರ್ಕಳ ಸಾಲ್ಮರದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಪುತ್ರಿಯಾದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸದ್ಯ ಸೇನೆಯಲ್ಲಿ ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು. ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದಲ್ಲಿಯೇ ವಾಸವಿದ್ದಾರೆ. ನಿನ್ನೆ

ಹೆಲಿಕಾಪ್ಟರ್ ದುರಂತ ವಿಷಯ ತಿಳಿಯುತ್ತಿದ್ದಂತೆ, ಮನೆಯಲ್ಲಿ ಸ್ಮಶಾನ ಮೌನ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು