6:31 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ !

09/12/2021, 18:55

ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ.

ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆಯಾಗಿದ್ದರು. ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮರಣವನ್ನಪ್ಪಿದ  

ಹರ್ಜಿಂದರ್ ಸಿಂಗ್ ಅವರು ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಪ್ರೇಮ ವಿವಾಹ ಆಗಿದ್ದರು.

ಕಾರ್ಕಳ ಸಾಲ್ಮರದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಪುತ್ರಿಯಾದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸದ್ಯ ಸೇನೆಯಲ್ಲಿ ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು. ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದಲ್ಲಿಯೇ ವಾಸವಿದ್ದಾರೆ. ನಿನ್ನೆ

ಹೆಲಿಕಾಪ್ಟರ್ ದುರಂತ ವಿಷಯ ತಿಳಿಯುತ್ತಿದ್ದಂತೆ, ಮನೆಯಲ್ಲಿ ಸ್ಮಶಾನ ಮೌನ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು