2:12 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ !

09/12/2021, 18:55

ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ.

ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆಯಾಗಿದ್ದರು. ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮರಣವನ್ನಪ್ಪಿದ  

ಹರ್ಜಿಂದರ್ ಸಿಂಗ್ ಅವರು ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಪ್ರೇಮ ವಿವಾಹ ಆಗಿದ್ದರು.

ಕಾರ್ಕಳ ಸಾಲ್ಮರದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಪುತ್ರಿಯಾದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸದ್ಯ ಸೇನೆಯಲ್ಲಿ ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು. ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದಲ್ಲಿಯೇ ವಾಸವಿದ್ದಾರೆ. ನಿನ್ನೆ

ಹೆಲಿಕಾಪ್ಟರ್ ದುರಂತ ವಿಷಯ ತಿಳಿಯುತ್ತಿದ್ದಂತೆ, ಮನೆಯಲ್ಲಿ ಸ್ಮಶಾನ ಮೌನ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು