9:21 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ

09/11/2025, 11:47

ಬೆಳ್ತಂಗಡಿ(reporterkarnataka.com): ಹಿರಿಯ ವಯಸ್ಸು ಶಾಪವಲ್ಲ. ಅದೊಂದು ವರ. ಹಿರಿಯರು ನಮ್ಮ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸುವುದು, ಅವರ ಯೋಗ ಕ್ಷೇಮಕ್ಕೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಿವೃತ್ತ ಶಿಕ್ಷಕ ಹಾಗೂ ಆಳ್ವಾಸ್ ಎಜುಕೇಶನಲ್ ಟ್ರಸ್ಟ್ ನ ಮಾಜಿ ಆಡಳಿತಾಧಿಕಾರಿ ಎಲ್.
ಜೆ. ಫೆರ್ನಾಂಡಿಸ್ ವೇಣೂರು ಅವರು ಹೇಳಿದರು.

ಅವರು ಬೆಳ್ತಂಗಡಿಯ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಂಸ್ಥೆಯು ಆಯೋಜಿಸಿದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಚರ್ಚ್ ನ ಧರ್ಮಗುರು ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಲಿಜ್ ಸಿಕ್ವೇರಾ, ವಂದನೀಯ ಫಾ. ಕ್ಲಿಫರ್ಡ್ ಪಿಂಟೊ, ಸಂಘದ ವಲಯ ಅಧ್ಯಕ್ಷ ಸಿಪ್ರಿಯನ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕಿ ಎಲಿಜಾ ಫೆರ್ನಾಂಡಿಸ್ ಶುಭ ಹಾರೈಸಿದರು.
ಸಂಘದ ಅಧ್ಯಕ್ಷ ಫ್ರಾನ್ಸಿಸ್ ಮಿರಾಂಡಾ ಸ್ವಾಗತಿಸಿದರು. ಕಾರ್ಯದರ್ಶಿ ಕಾಲಿಸ್ತ್ ಡಿ ಸೋಜಾ ವಂದಿಸಿದರು. ಬೆನೆಡಿಕ್ಟ್ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಭಾಗವಹಿಸಿದ್ದ ಎಲ್ಲಾ ಹಿರಿಯ ನಾಗರಿಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು