1:31 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಿಂದ  ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ 

23/06/2022, 00:13

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ ನಗರದ ಶಕ್ತಿನಗರದ ಕಲಾಂಗಣದಲ್ಲಿ ಜರುಗಿತು.

ಕಾರ್ಯಾಗಾರವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರಾದ Snr.PPF. ಭರತ್ ದಾಸ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ರಾಷ್ಟ್ರೀಯ ನಿರ್ದೇಶಕರಾದ(ಆಡಳಿತ)Snr.Csl.PPF. ಜೋಸ್ ಕಂಡೋತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂತಾರಾಷ್ಟ್ರೀಯ ನಿಕಟ ಪೂರ್ವ ಅಧ್ಯಕ್ಷರಾದ  Snr.PPF. ಡಾ.ಕೇದಿಗೆ ಅರವಿಂದ್ ರಾವ್, ರಾಷ್ಟ್ರೀಯ ಉಪಾಧ್ಯಕ್ಷರಾದ Snr.PPF. ಸಂಪತ್ ಕುಮಾರ್,  ಕಾರ್ಯದರ್ಶಿ Snr.PPF.ರಾಜೇಶ್ ವೈಭವ್,ಜನರಲ್ ಲೀಗಲ್ ಕೌನ್ಸಿಲ್ Snr.Csl.ವರ್ಗೀಸ್  ವೈದ್ಯನ್, ಕೋಶಾಧಿಕಾರಿ Snr.PPF ಉದಯಭಾನು, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನಿನ ನಿಕಟಪೂರ್ವ ಅಧ್ಯಕ್ಷರಾದ Snr.PPF.ಜಿ.ಕೆ. ಹರಿಪ್ರಸಾದ ರೈ, ಕಾರ್ಯದರ್ಶಿ Snr.PPF. ಫ್ಲೇವಿ ಡಿಮೆಲ್ಲೊ ಉಪಸ್ಥಿತರಿದ್ದರು. 


ತರಬೇತಿ ಕಮ್ಮಟವನ್ನು ರಾಜೇಶ್ ವೈಭವ್ ಸಂಯೋಜಿಸಿದರು. ತರಬೇತುದಾರರಾಗಿ Snr.PPF. ನಾಗೇಶ್, ವರ್ಗೀಸ್ ವೈದ್ಯನ್, ಎಂ.ಆರ್.ಜಯೇಶ್, ಸಂಪತ್ ಕುಮಾರ್, ಉದಯಭಾನು, ಕೇದಿಗೆ ಅರವಿಂದ ರಾವ್  ಅವರು ಆಗಮಿಸಿ ತರಬೇತಿ ನಡೆಸಿಕೊಟ್ಟರು. ಕರ್ನಾಟಕ ರಾಜ್ಯದ  27 ಲೀಜನ್ ಗಳಿಂದ ಸುಮಾರು 100 ರಷ್ಟು ಪ್ರತಿನಿಧಿಗಳು ಭಾಗವಹಿಸಿದ್ದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಮುಖಪತ್ರಿಕೆ ‘ಇನ್ಸ್ಕ್ರೋಲ್’ಮತ್ತು ಮಂಗಳೂರು ಲೀಜನಿನ ಮುಖ ಪತ್ರಿಕೆ ‘ಸುಮಂಗಲಾ’ ವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರು ಅನಾವರಣಗೊಳಿಸಿದರು. ಲೀಜನ್ ಅಧ್ಯಕ್ಷ  Snr.PPF. ಕಿಶೋರ್ ಫೆರ್ನಾಂಡಿಸ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ದೇಶಕ Snr ದತ್ತಾತ್ರೇಯ ವಂದಿಸಿದರು. Snr.PPF.ಶಾಲಿನಿ ಸುವರ್ಣ ಸೀನಿಯರ್ ವಾಣಿ ಪಠಿಸಿದರು. ಜೇಸಿ ಚೇತನಾ ದತ್ತಾತ್ರೇಯ ಕಾರ್ಯಕ್ರಮ  ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು