10:32 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲಿಜನ್ ಗೆ ರಾಷ್ಟ್ರೀಯ ಉಪಾಧ್ಯಕ್ಷ ಸಂಪತ್ ಕುಮಾರ್ ಭೇಟಿ

09/12/2022, 16:03

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲಿಜನ್ ಗೆ ಸೀನಿಯರ್ ಪಿಪಿಎಫ್ ಸಂಪತ್ ಕುಮಾರ್ ಅವರು ಅಧಿಕೃತ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ನಗರದ ಯೆಯ್ಯಾಡಿ-ಕೊಂಚಾಡಿಯಲ್ಲಿರುವ ಹೋಟೆಲ್ ಶ್ರೀ ಶಂಕರ ಭವನ ದಲ್ಲಿ ಆಯೋಜಿಸಿದ ಸಭೆಯಲ್ಲಿ ಅವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ರಾಷ್ಟ್ರೀಯ ನಿರ್ದೇಶಕರಾದ (ಸಮುದಾಯ ಅಭಿವೃದ್ಧಿ) ಐಪಿಎನ್ ಪಿ ಸೀನಿಯರ್ ಪಿಪಿಎಫ್ ಚಿತ್ರ ಕುಮಾರ್ ಪ್ರಾಯೋಜಕತ್ವದಲ್ಲಿ 10 ಕನ್ನಡಕಗಳನ್ನು ವಿತರಿಸಲಾಯಿತು. ಐಪಿಎನ್ ಪಿ ಸೀನಿಯರ್ ಡಾ. ಅರವಿಂದ ಕೇದಿಗೆ ಅವರು ಸಂಪತ್ ಕುಮಾರ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಲೀಜನ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್ ಅತಿಥಿಯನ್ನು ಸ್ವಾಗತಿಸಿದರು. ಲೀಜನ್ ನ ಸಾರ್ವಜನಿಕ ಸಂಪರ್ಕ ಅಧಿಕಾರಿ(ಪಿ ಆರ್ ಒ) ಹಾಗೂ ಜತೆ ಕಾರ್ಯದರ್ಶಿ ಲತಾ ಕಲ್ಲಡ್ಕ ಅವರು ಸಂಪತ್ ಕುಮಾರ್ ಅವರ ಕಿರು ಪರಿಚಯ ನಡೆಸಿಕೊಟ್ಟರು. ಸೀನಿಯರ್ ವಾಣಿಯನ್ನು ಅಶೋಕ್ ಅವರು ವಾಚಿಸಿದರು. ಲಿಜನ್ ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ರೈ,
ಉಪಾಧ್ಯಕ್ಷರಾದ ದತ್ತಾತ್ರೇಯ,ಕೋಶಾಧಿಕಾರಿ ಶಾಲಿನಿ ಪ್ರಶಾಂತ್ ಸುವರ್ಣ, ಸೀನಿಯರೇಟ್ ಅಧ್ಯಕ್ಷೆ ನಿರ್ಮಲಾ ಪ್ರಮೋದ್,
ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಸದಸ್ಯರಾದ ಹೀರಾಚಂದ್, ಪ್ರಶಾಂತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಲಿಜನ್ ಕಾರ್ಯದರ್ಶಿ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು