3:39 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ 

19/04/2022, 17:23

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. 

ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ್ಮಣ್ಣು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಸೀನಿಯರ್ ಸಂತೋಷ್ ಕುಮಾರ್, ಖಜಾಂಚಿಯಾಗಿ ರಾಜೇಶ್ ಟಿ. ಆಚಾರ್ಯ, ಸೀನಿಯರೇಟ್ ಅಧ್ಯಕ್ಷೆಯಾಗಿ ಸಿಲ್ವಿಯಾ ಕ್ಯಾಸ್ಟಲೀನೊ ಆಯ್ಕೆಯಾದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಸಿ ಐ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಭರತ್ ದಾಸ್ ಭಾಗವಹಿಸಿದ್ದು, ಅತಿಥಿಯಾಗಿ ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಡಾ. ಕೇದಿಗೆ ಅರವಿಂದ ರಾವ್ ಉಪಸ್ಥಿತರಿದ್ದರು. 

ಮಂಗಳೂರು ಲೀಜನ್ ನ ಸೀನಿಯರ್ ಹರಿಪ್ರಸಾದ್ ರೈ ಕಾರಮೊಗರಗುತ್ತು, ಕಿಶೋರ್ ಫೆರ್ನಾಂಡಿಸ್, ಶಾಲಿನಿ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೊ ಭಾಗವಹಿಸಿದ್ದರು.


ಸಮಾರಂಭದಲ್ಲಿ ಮಣಿಪಾಲ ಲೀಜನ್ ಹಾಗೂ ಸಾಲಿಗ್ರಾಮ ಲೀಜನ್ ನವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು