2:01 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನಿನ 2022 – 23ನೇ ಸಾಲಿನ ಪದಗ್ರಹಣ

29/04/2022, 00:26

ಮಂಗಳೂರು( reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನಿನ 2022 – 23ನೇ ಸಾಲಿನ ಪದಗ್ರಹಣ ಸಮಾರಂಭ ನಗರದ ಹೋಟೆಲ್ ಮಾಯಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಜರುಗಿತು.

2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಶೋರ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ಫ್ಲೇವಿ ಡಿ ಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಆಗಿ ಲತಾ ಕಲ್ಲಡ್ಕ ಹಾಗೂ ಖಜಾಂಚಿಯಾಗಿ ಶಾಲಿನಿ ಪಿ. ಸುವರ್ಣ,ಸೀನಿಯರೇಟ್ ಅಧ್ಯಕ್ಷೆಯಾಗಿ ನಿರ್ಮಲಾ ಪ್ರಮೋದ್ , ಸೀನಿಯರೇಟ್ ಕಾರ್ಯದರ್ಶಿಯಾಗಿ ಮಾಲತಿ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಿಶೋರ್ ಫೆರ್ನಾಂಡಿಸ್ ಅವರಿಗೆ ಕಳೆದ ಸಾಲಿನ ಅಧ್ಯಕ್ಷರಾದ ರಾಷ್ಟೀಯ ಪ್ರಶಸ್ತಿ ವಿಜೇತರಾದ ಹರಿಪ್ರಸಾದ್ ಅವರು ಪ್ರಮಾಣ ವಚನ ಬೋಧಿಸಿದರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಡಾ.ಅರವಿಂದ ರಾವ್ ಕೇದಿಗೆ ಉಪಸ್ಥಿತರಿದ್ದು ಶುಭ ಹಾರೈಸಿದರು. ಅತಿಥಿಗಳಾಗಿ ಭಾರತೀಯ ಜೂನಿಯರ್ ಚೇಂಬರಿನ ಜನರಲ್ ಲೀಗಲ್ ಕೌನ್ಸಿಲರ್, ಜೇಸಿ ಸೆನೆಟರ್ ಸೌಜನ್ಯ ಹೆಗ್ಡೆ, ಭಾರತೀಯ ಭೂಸೇನೆಯ ನಿವೃತ್ತ ಹಿರಿಯ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಬ್ರಿ, ಅಂತಾರಾಷ್ಟ್ರೀಯ ಸೀನಿಯರ್ ಚೇಂಬರಿನ ನಿರ್ದೇಶಕರಾದ ಚಿತ್ರ ಕುಮಾರ್  ಅವರು ವೇದಿಕೆಯಲ್ಲಿದ್ದರು.


ಈ ಸಂದರ್ಭದಲ್ಲಿ 6 ಮಂದಿ ಹೊಸ ಸದಸ್ಯರು ಮಂಗಳೂರು ಲೀಜನಿಗೆ ಸೇರ್ಪಡೆಗೊಂಡರು. ಸದಸ್ಯರಾದ ಅಶೋಕ್ ಎಂ.ಕೆ. ಮತ್ತು ವಿಕಾಸ್ ಶೆಟ್ಟಿ ದೇಣಿಗೆಯಿತ್ತರು. ಅಧ್ಯಕ್ಷರಾದ ಹರಿಪ್ರಸಾದ್ ಅವರು ಸ್ವಾಗತಿಸಿ, ಹೊಸದಾಗಿ ಆಯ್ಕೆಯಾದ ಕಾರ್ಯದರ್ಶಿ ಫ್ಲೇವಿ ಡಿಮೆಲ್ಲೊರವರು ವಂದಿಸಿದರು.

ಪ್ರೀತಿ ರೈ, ಶಾಲಿನಿ ಪ್ರಶಾಂತ್, ಸುರೇಶ್ ಎಂ.ಎಸ್.,ಲತಾ ಕಲ್ಲಡ್ಕ, ದತ್ತಾತ್ರೇಯ ಬಿ., ಫ್ಲೇವಿ ಡಿಮೆಲ್ಲೊ ವಿವಿಧ ಜವಾಬ್ದಾರಿ ನಿರ್ವಹಿಸಿದರು.ಉಡುಪಿ ಟೆಂಪಲ್ ಸಿಟಿ ಲೀಜನ್, ಬಂಟ್ವಾಳ ನೇತ್ರಾವತಿ ಸಂಗಮ ಲೀಜನ್, ಉಳ್ಳಾಲ ರಾಣಿ ಅಬ್ಬಕ್ಕ ಲೀಜನ್, ಮಂಗಳೂರು ಜೇಸಿಸ್ ಮತ್ತಿತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು