9:44 PM Thursday9 - April 2026
ಬ್ರೇಕಿಂಗ್ ನ್ಯೂಸ್
Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ…

ಇತ್ತೀಚಿನ ಸುದ್ದಿ

ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದ ಉರಗತಜ್ಞ ನರೇಶ್: ವಿಧಾನ ಸಭೆ ಚುನಾವಣೆಗೂ ಸ್ಪರ್ಧಿಸಿದ್ದರು ಅವರು!

31/05/2023, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗತಜ್ಞ ಸಾವು ಸ್ನೇಕ್ ನರೇಶ್ (51) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಈ ಘಟನೆ ನಡೆದಿದೆ.
ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಅವರಿಗೆ ಮತ್ತೊಂದು ಹಾವು ಹಿಡಿಯಲು ಮಧ್ಯಾಹ್ನ ಕರೆ ಬಂದಿತ್ತು.


ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ಕೂಡಲೇ ನಾಗರಹಾವು ಕಚ್ಚಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನರೇಶ್ ಸಾವನ್ನಪ್ಪಿದ್ದಾರೆ.
ಸ್ಕೂಟಿ ಡಿಕ್ಕಿಯಲ್ಲಿ ಇದ್ದದ್ದು ಎರಡೇ ಹಾವು.
ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳಿದ್ದವು.
ಕಾರಿನ ಸೀಟ್, ಡಿಕ್ಕಿಯಲ್ಲಿ 20ಕ್ಕೂ ಹೆಚ್ಚು ಚೀಲಗಳಲ್ಲಿ ಹಾವು ಇರುತ್ತಿದ್ದವು. 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಕಾಡಿನೊಳಗೆ ಹಾವುಗಳನ್ನ ಬಿಟ್ಟು ನರೇಶ್ ಬರುತ್ತಿದ್ದರು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಅವರು ಖ್ಯಾತಿ ಪಡೆದಿದ್ದರು. ಸಾವಿರಾರು ಹಾವುಗಳನ್ನ ಅವರು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಕಾಡಿನೊಳಗೆ ಬಿಡುತ್ತಿದ್ದರು. ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. 2013ರಲ್ಲಿ ವಿಧಾನಸಭಾ ಚುನಾವಣೆಗೆ ನರೇಶ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು