11:53 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದ ಉರಗತಜ್ಞ ನರೇಶ್: ವಿಧಾನ ಸಭೆ ಚುನಾವಣೆಗೂ ಸ್ಪರ್ಧಿಸಿದ್ದರು ಅವರು!

31/05/2023, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗತಜ್ಞ ಸಾವು ಸ್ನೇಕ್ ನರೇಶ್ (51) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಈ ಘಟನೆ ನಡೆದಿದೆ.
ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಅವರಿಗೆ ಮತ್ತೊಂದು ಹಾವು ಹಿಡಿಯಲು ಮಧ್ಯಾಹ್ನ ಕರೆ ಬಂದಿತ್ತು.


ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ಕೂಡಲೇ ನಾಗರಹಾವು ಕಚ್ಚಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನರೇಶ್ ಸಾವನ್ನಪ್ಪಿದ್ದಾರೆ.
ಸ್ಕೂಟಿ ಡಿಕ್ಕಿಯಲ್ಲಿ ಇದ್ದದ್ದು ಎರಡೇ ಹಾವು.
ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳಿದ್ದವು.
ಕಾರಿನ ಸೀಟ್, ಡಿಕ್ಕಿಯಲ್ಲಿ 20ಕ್ಕೂ ಹೆಚ್ಚು ಚೀಲಗಳಲ್ಲಿ ಹಾವು ಇರುತ್ತಿದ್ದವು. 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಕಾಡಿನೊಳಗೆ ಹಾವುಗಳನ್ನ ಬಿಟ್ಟು ನರೇಶ್ ಬರುತ್ತಿದ್ದರು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಅವರು ಖ್ಯಾತಿ ಪಡೆದಿದ್ದರು. ಸಾವಿರಾರು ಹಾವುಗಳನ್ನ ಅವರು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಕಾಡಿನೊಳಗೆ ಬಿಡುತ್ತಿದ್ದರು. ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. 2013ರಲ್ಲಿ ವಿಧಾನಸಭಾ ಚುನಾವಣೆಗೆ ನರೇಶ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು