6:01 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸೀರಿಯನ್ನುಟ್ಟ ಕಿನ್ನರಿಯರಿಂದ ಸೀಗೆಹುಣ್ಣಿಮೆ ಸಂಭ್ರಮ: ಅಪ್ಪಟ ಗ್ರಾಮೀಣ ಸೊಗಡಿನ ಸಣ್ಣ ಗೌರಿಹಬ್ಬ

21/10/2021, 08:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕಾಚರಣೆಗಳಿಗೆ ಲೆಕ್ಕವಿಲ್ಲ, ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಅಮವಾಸ್ಯೆ ಹುಣ್ಣಿಮೆಗೂ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುತ್ತೆ.ಅಂತೆಯೇ ಸೀಗೆಹುಣ್ಣಿಮೆ ಸಣ್ಣ ಗೌರಿಹಬ್ಬ ಎಂದು ಕರೆಸಿಕೊಳ್ಳುವ ಕಿನ್ನರಿಯರ ಹಬ್ಬವಾಗಿದೆ.

ದಸರಾ ಹಬ್ಬದ ನಂತರದಲ್ಲಿಯೇ ಗರಿಗೆದರುವ ಸೀಗೆಹುಣ್ಣಿಮೆ ಅಪ್ಪಟ ಗ್ರಾಮೀಣ ಸೊಗಡಿನ ಕಿನ್ನರಿಯರ ಹಬ್ಬವಾಗಿದೆ. 

ಕಿನ್ನರಿಯರು ಹಿರಿಯರ ಹೆಂಗಳೆಯರ ಸೀರೆಯನ್ನುಟ್ಟು, ದೀಪಗಳೊಂದಿಗೆ  ಸಕ್ಕರಾರತಿಯನ್ನು  ಇಟ್ಟುಕೊಂಡು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಶ್ರೀಗೌರಿ ಮೂರ್ತಿ ಗೆ ಬೆಳಗುವ ಸಾಂಪ್ರದಾಯಿಕ ಹಬ್ಭ ಇದಾಗಿದೆ. ಸೀಗೆ ಹುಣ್ಣಿಮೆಯಂದು ಕೂಡ್ಲಿಗಿ ಪಟ್ಟಣ ಸೇರಿದಂತೆ ಕೂಡ್ಲಿಗಿ ತಾಲೂಕು, ವಿವಿಧೆಡೆಯ ಗ್ರಾಮೀಣ ಭಾಗಗಳಲ್ಲಿ ಮಕ್ಕಳು ತಮ್ಮ ಹೆತ್ತವುರು ತೊಡಿಸಿದ ಸೀರೆಯನ್ನುಟ್ಟು ಗೌರಿಯನ್ನಾರಾಧಿಸಿ ಸಂಭ್ರಮಿಸಿದರು. ಸೀಗೆ ಹುಣ್ಣಿಮೆ ಹಲವೆಡೆಗಳಲ್ಲಿ ಸೀಗೆ ಹುಣ್ಣಿಮೆ ಎಂದರೆ ಮತ್ತಿತರೆ ಕಡೆಗಳಲ್ಲಿ ಸಣ್ಣಗೌರಿಹಬ್ಬ ಎಂದೇ ಪ್ರತೀತಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು