11:32 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

“ಸೇವೆಗಾಗಿ ನೃತ್ಯ”: ನಾಳೆ ನ್ಯೂಯಾರ್ಕ್ ನಲ್ಲಿ ನಾಟ್ಯ ಸೇವೆಯ ಬೃಹತ್ ಪ್ರದರ್ಶನ

21/09/2024, 20:26

ಮಂಗಳೂರು(reporterkarnataka.com):ದೂರದ ಅಮೆರಿಕಾದಲ್ಲಿ ಹದಿಹರೆಯದ ಮಕ್ಕಳು ಪಸರಿಸುತ್ತಿರುವ ನಮ್ಮ ನಾಡಿನ ಸಾಂಸ್ಕೃತಿಕ ಸೌರಭ ದೂರದ ಅಮೇರಿಕಾದಲ್ಲಿ ಹುಟ್ಟಿ ಬೆಳೆದ ನಮ್ಮ ನಾಡಿನ ವಂಶಜರ ಹದಿಹರೆಯದ ಸುಮಾರು 15 ಬಾಲಕ- ಬಾಲಕಿಯರು ನಮ್ಮ ಸಾಂಸ್ಕೃತಿಕ ಪರಂಪರೆಯ ಉನ್ನತ ಕಲೆಯಾದ ಭರತನಾಟ್ಯವನ್ನು “ನಾಟ್ಯ ಸೇವಾ” ಎಂಬ ವಿನೂತನ ಮಾದರಿಯ ಸೇವಾ ಸಂಸ್ಥೆಯನ್ನು ಕಟ್ಟಿಕೊಂಡು “ಸೇವೆಗಾಗಿ ನೃತ್ಯ” ( Dance to Serve) ಎಂಬ ಶೀರ್ಷಿಕೆಯಡಿ ನೃತ್ಯ ನಾಟಕವನ್ನು ಪ್ರದರ್ಶಿಸುತ್ತಿದ್ದಾರೆ.
ಆನ್ಯ ಶೆಟ್ಟಿ ಎಂಬ ಬಾಲಕಿಯು ತನ್ನ ಓರಗೆಯ ಇತರ ಗೆಳತಿಯರ ಜೊತೆ ಸೇರಿ ನಡೆಸುತ್ತಿರುವ ಈ ನಾಟ್ಯ ಸೇವೆಯ ಒಂದು ಬೃಹತ್ ಪ್ರದರ್ಶನವು ಇದೇ ಸೆ. 22ರಂದು ಅಪರಾಹ್ನ ಗಂಟೆ 3:00 ಕ್ಕೆ ಸರಿಯಾಗಿ “ಬೈತಡೇಲ್ ಮಕ್ಕಳ ಆಸ್ಪತ್ರೆ” (Blythedale children’s Hospital), ಫೋಕ್ಸ್‌ಲೇನ್ ಹೈಸ್ಕೂಲ್ ಥಿಯೇಟರ್, ಬೆಡ್ ಪೋರ್ಡ್ ನ್ಯೂಯಾರ್ಕ್ ಇಲ್ಲಿ ನಡೆಯಲಿರುವುದು. ಆನ್ಯ ಮಂಗಳೂರು ಸುರತ್ಕಲ್ ನಿವಾಸಿಗಳಾದ ಪ್ರೇಮಾ ಹಾಗೂ ನಾರಾಯಣ ದಂಪತಿ ಮೊಮ್ಮಗಳು. ಈ ನೃತ್ಯ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭರತನಾಟ್ಯ, ನೃತ್ಯ ನಾಟಕ, ಶಾಸ್ತ್ರೀಯ/ಅರೆಶಾಸ್ತ್ರೀಯ/ ನವ್ಯ ಈ ರೀತಿಯ ವಿವಿಧ ಪ್ರಕಾರಗಳ ಪ್ರದರ್ಶನವಿರುವುದು. ಈ ಪ್ರದರ್ಶನದಲ್ಲಿ ಇರುವ ನೃತ್ಯ ಕೊರಿಯೋಗ್ರಾಫಿ ಹಾಗೂ ಮಾರ್ಗದರ್ಶನದ ಹಿಂದೆ ಗುರು ಲತಿಕಾ ಉನ್ನಿ ಮತ್ತು ವಿದುಷಿ ಸುಮಂಗಲಾ ರತ್ನಾಕರರಾವ್ ಹಾಗೂ ಎಲ್ಲಾ
ಪೋಷಕರ ಬೆಂಬಲವಿದೆ.
” ತಡೇಲ್ ಮಕ್ಕಳ ಆಸ್ಪತ್ರೆ”ಯು ಮಕ್ಕಳ ಶುಶೂಷೆ, ವಿದ್ಯಾಭ್ಯಾಸ ಮುಂತಾದ ಸೇವೆಗಳನ್ನು ಬಹಳ ಮುತುವರ್ಜಿಯಿಂದ ನೀಡುತ್ತಿದ್ದು ಈ ಆಸ್ಪತ್ರೆಯ ವಿವಿಧ ಸೇವೆಗಳನ್ನು ಹಾಗೂ ಈ ಆಸ್ಪತ್ರೆಯ ಒತ್ತಿನಲ್ಲಿರುವ ಕಾಲೇಜಿನ ಅಭಿವೃದ್ಧಿಪರ ಚಟುವಟಿಕೆಗಳನ್ನು ಗುರುತಿಸಿದ ಈ ಮಕ್ಕಳು ಈ ಆಸ್ಪತ್ರೆಗೆ ಆರ್ಥಿಕ ಸಹಾಯಾರ್ಥಕವಾಗಿ ನೀಡಲು “ಸೇವೆಗಾಗಿ ನೃತ್ಯ” ಎನ್ನುವ ಈ ಕಾರ್ಯಕ್ರಮವನ್ನು ಹಮ್ಮಿಕ ದೊಂಡಿರುವರು ಈಗಾಗಲೇ ಸುಮಾರು 25 ಸಾವಿರ ಡಾಲರ್ ನಷ್ಟು ನಿಧಿ ಸಂಗ್ರಹಿಸಿ ನೀಡಿರುವ ಈ ತಂಡವು ಪ್ರಸ್ತುತ ಕಾರ್ಯಕ್ರಮದ ಮುಖೇನ ಒಂದು ದೊಡ್ಡ ಮಟ್ಟದ ಮೊತ್ತವನ್ನು ಸಹಾಯಾರ್ಥವಾಗಿ, ಮಾನವೀಯ ನೆಲೆಯಲ್ಲಿ ಯಾವುದೇ ಲಾಭ ನಿರೀಕ್ಷಿಸದೆ ಮಕ್ಕಳಿಗೆ ಸೇವೆ ನೀಡುತ್ತಿರುವ ಈ ಆಸ್ಪತ್ರೆಗೆ ನೀಡುವರೇ ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು