7:50 AM Sunday1 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ… ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ… ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್.… KPCC president | 2028ರ ಚುನಾವಣೆಯಲ್ಲಿ ಹಾಸನದ 7 ಕ್ಷೇತ್ರಗಳಲ್ಲೂ ಗೆಲುವು: ಉಪ…

ಇತ್ತೀಚಿನ ಸುದ್ದಿ

ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

16/04/2025, 11:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 12.ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಆದಿಕರ್ನಾಟಕ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸುರೇಖಾ (38) ಎಂಬವರು ಏ. 13ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.
ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಐಪಿಸಿ ಕಲಂಗಳು 329(4), 74, 75, 115(2), 352, 351(2)(3) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿರೋಧಕ) ಕಾಯ್ದೆಯ 3(1)(w), 3(2)(va) ರ ಅಂಗವಾಗಿ ಬಣಕಲ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 0026/2025ರಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು