6:18 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

16/04/2025, 11:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 12.ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಆದಿಕರ್ನಾಟಕ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸುರೇಖಾ (38) ಎಂಬವರು ಏ. 13ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.
ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಐಪಿಸಿ ಕಲಂಗಳು 329(4), 74, 75, 115(2), 352, 351(2)(3) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿರೋಧಕ) ಕಾಯ್ದೆಯ 3(1)(w), 3(2)(va) ರ ಅಂಗವಾಗಿ ಬಣಕಲ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 0026/2025ರಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು