5:09 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

16/04/2025, 11:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 12.ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಆದಿಕರ್ನಾಟಕ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸುರೇಖಾ (38) ಎಂಬವರು ಏ. 13ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.
ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಐಪಿಸಿ ಕಲಂಗಳು 329(4), 74, 75, 115(2), 352, 351(2)(3) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿರೋಧಕ) ಕಾಯ್ದೆಯ 3(1)(w), 3(2)(va) ರ ಅಂಗವಾಗಿ ಬಣಕಲ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 0026/2025ರಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು