3:41 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

SEZ | ಎಸ್‌ಇಝೆಡ್ ಅಧಿಕಾರಿಗಳ ಆದೇಶ ತುಳುನಾಡಿದ ನಂಬಿಕೆಗೆ ಅಪಮಾನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

28/02/2025, 22:56

ಮಂಗಳೂರು(reporterkarnataka.com): ಇಲ್ಲಿಗೆ ಸಮೀಪದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್ ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇದೀಗ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ. ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಕೂಡದು. ವಿಶೇಷ ಆರ್ಥಿಕ ವಲಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಸುಸೂತ್ರವಾಗಿ ನಡೆಯುಲು ದೈವದೇವರ ಅನುಗ್ರಹವೂ ಅಷ್ಟೇ ಮುಖ್ಯ. ಆದ್ದರಿಂದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಡೆಸಲಿ. ಸಂಸದರು, ಜಿಲ್ಲಾಧಿಕಾರಿಗಳು, ಎಸ್‌ಇಝೆಡ್ ಅಧಿಕಾರಿಗಳು, ಸಂಬಂಧಪಟ್ಟವರು ಕೂಡಲೇ ಒಳ್ಳೆಯ ನಿರ್ಧಾರಕ್ಕೆ ಕೈಗೊಳ್ಳುವಂತೆ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು