11:53 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಶಾಲೆ ಗಂಟೆ ಬಾರಿಸಲು ಮುಹೂರ್ತ ಫಿಕ್ಸ್: 1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್ 25ರಿಂದ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ

18/10/2021, 20:21

ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್  25ರಂದು ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಿದ್ದು, ಅಕ್ಟೋಬರ್ 20ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸುವ ಕುರಿತು ಕೊರೊನಾ ತಾಂತ್ರಿಕ ಸಮಿತಿ ಸಲಹೆ ಮಾಡಿದೆ.

1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್  25ರಿಂದ ಆರಂಭವಾಗಲಿದೆ. ಆದರೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಒಪ್ಪಿಗೆ ಕಡ್ಡಾಯವಾಗಿದೆ. ಹಾಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ತರಗತಿಗೂ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು