9:14 PM Wednesday3 - September 2025
ಬ್ರೇಕಿಂಗ್ ನ್ಯೂಸ್
ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು