11:50 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು