9:45 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು