8:20 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಸದಸ್ಯರಾಗಿ ಶಬ್ಬೀರ್ ಅಹ್ಮದ್ ಪಾಷಾ ನೇಮಕ

26/05/2025, 21:19

ಶ್ರೀನಿವಾಸಪುರ(reporterkarnataka.com): ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ.
ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಈ ಹಿಂದೆ ಕೋಲಾರ ಜಿಲ್ಲಾ ವಕ್ಫ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದು, ಜೊತೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದಲ್ಲಿ ನಿರ್ದೇಶಕರಾಗಿದ್ದಾರೆ. ಅಲ್ಲದೆ, ಶ್ರೀನಿವಾಸಪುರ ತಾಲ್ಲೂಕು ಭಾರತ ಸೇವಾದಳದ ಉಪಾಧ್ಯಕ್ಷರಾಗಿ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೂಡಾ ಸೇವೆ ನೀಡುತ್ತಿದ್ದಾರೆ.
ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ನೇಮಕವಾದ ಹಿನ್ನೆಲೆಯಲ್ಲಿ ಸಂತೋಷ ವ್ಯಕ್ತಪಡಿಸಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಶಾಸಕ ಕೆ.ಆರ್. ರಮೇಶ್ ಕುಮಾರ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ (ಕೆ.ಎಂ.ಡಿ.ಸಿ) ನಿರ್ದೇಶಕ ಅಬ್ದುಲ್ ಖಯೂಮ್ ಹಾಗೂ ಇತರ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
ಅಲ್ಪಸಂಖ್ಯಾತ ಸಮುದಾಯದ ಹಿತಕ್ಕಾಗಿ ಶ್ರಮಿಸುವ ಸಂಕಲ್ಪವನ್ನು ವ್ಯಕ್ತಪಡಿಸಿರುವ ಅವರು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯದವರೆಗೆ ತಲುಪಿಸಲು ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ. ಇದಲ್ಲದೆ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರತ್ತ ವಿಶೇಷ ಗಮನ ಹರಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು